SSF ಎಣ್ಮೂರು ಶಾಖೆ
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ರಿ) SSF ರಾಜ್ಯದಲ್ಲಿ 1989 ಸೆಪ್ಟೆಂಬರ್ 19ಕ್ಕೆ ಅಸ್ತಿತ್ವಕ್ಕೆ ಬಂತು. ಇದರ ಅಂಗವಾಗಿ ಸಂಘಟನಾ ಧ್ವಜ ದಿನವನ್ನು ಎಣ್ಮೂರು ಶಾಖಾ ವತಿಯಿಂದ ಪಡ್ಪಿನಂಗಡಿ ವಠಾರದಲ್ಲಿ ನಡೆಸಲಾಯಿತು. ಸಂಘಟನೆಯೂ ಬಂದ ಹಾದಿ ಮತ್ತು ಶಾಖಾ ಕಾರ್ಯಚಟುವಟಿಕೆಗಳನ್ನು ಹೇಳುವ ಮೂಲಕ ಮಾಜಿ ಶಾಖಾ ಕಾರ್ಯದರ್ಶಿ ರಹ್ಮಾನ್ ಟಿ ಎಸ್ ಎಣ್ಮೂರು ಕಾರ್ಯಕ್ರಮವನ್ನು ಸ್ವಾಗತಿಸಿ, ಎಸ್ ವೈ ಎಸ್ ಎಣ್ಮೂರು ಬ್ರಾಂಚ್ ಇದರ ಅಧ್ಯಕ್ಷರಾದ ಕೆ ಸಿ ಸುಲೈಮಾನ್ ಮುಸ್ಲಿಯಾರ್ ಅವರು ಧ್ವಜಾರೋಹಣ ನೆರವೇರಿಸಿದರು.


ನಂತರ ಎಸ್.ಎಸ್.ಎಫ್ ರಾಜ್ಯ ಸಮಿತಿಯ ಸುತ್ತೋಲೆಯಂತೆ ಸಂಘಟನಾ ಭಿತಿ ಪತ್ರಗಳನ್ನು ಪ್ರದರ್ಶಿಸಲಾಯಿತು. ಎಸ್ ಎಸ್ ಎಫ್ ನಿಂತಿಕಲ್ಲು ಸೆಕ್ಟರ್ ಇದರ ಅಧ್ಯಕ್ಷರಾದ ಜಬ್ಬಾರ್ ಹನೀಫಿ ಅವರು ಕೆಲವು ಹಿತನುಡಿಗಳನ್ನು ಹೇಳುತ್ತಾ ಶಾಖಾ ಸದಸ್ಯರಿಗೆ ಧ್ವಜ ದಿನದ ಶುಭಾಶಯ ಕೋರಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ