ಬೆಂಗಳೂರು, ಸೆ.20: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ರಾಜ್ಯಸಭಾ ಸದಸ್ಯರಾಗಿ ದೇವರ ಹೆಸರಿನಲ್ಲಿಂದು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆಗೆ ಇತ್ತೀಚೆಗೆ ಅವಿರೋಧವಾಗಿ ಕರ್ನಾಟಕದಿಂದ ಹೆಚ್.ಡಿ.ದೇವೇಗೌಡ ಆಯ್ಕೆಯಾಗಿದ್ದರು.ರಾಜ್ಯಸಭೆ ಈ ಬಾರಿ ಭಾನುವಾರ ಕಾರ್ಯನಿರ್ವಹಿಸಿದ್ದು ಅಧಿವೇಶನ ಬೆಳಿಗ್ಗೆ 9:00 ಗಂಟೆಗೆ ಭಾಷಣ ವೇಳೆ ದೇವೇಗೌಡ ಪ್ರಮಾಣವಚನ ಸ್ವೀಕರಿಸಿದರು.
ಕಳೆದ ಜುಲೈ 22 ರಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೇಶದ 20 ರಾಜ್ಯಗಳಿಂದ ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾಗಿದ್ದ 61 ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಗಿತ್ತು. ಆದರೆ ಪ್ರಮಾಣವಚನಕ್ಕಾಗಿಯೇ ದೆಹಲಿಗೆ ಅದು ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗಿರುವ ಸಮಯದಲ್ಲಿ ವಿಮಾನಪ್ರಯಾಣ ಸೂಕ್ತವಲ್ಲ ಎಂಬ ಕಾರಣಕ್ಕೆ ದೇವೇಗೌಡರು ಪ್ರಮಾಣ ವಚನ ಸ್ವೀಕಾರ ಮುಂದೂಡಿ, ಸಂಸತ್ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದರು. ಇಂದುಭಾನುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು. 1996ರ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ನಾಯಕರೊಬ್ಬರು ರಾಜ್ಯಸಭೆಗೆ ಪ್ರವೇಶಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ