ವಿಟ್ಲ: ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ ಬಾಬುಕಟ್ಟೆಯಲ್ಲಿ ಸಂಭವಿಸಿದೆ.
ತರಕಾರಿ ವ್ಯಾಪಾರಿ ಅಬ್ದುಲ್ಲ ಅವರ ಮನೆಯ ಪಕ್ಕದ ಧರೆಯು ಜೋರಾದ ಮಳೆಗೆ ಕುಸಿದು ಮನೆ ಮೇಲೆ ಬಿದ್ದಿದೆ. ಕುಟುಂಬದ ಆರು ಮಂದಿ ಕುಸಿದು ಬಿದ್ದ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭಾರಿ ದೊಡ್ಡ ಪ್ರಮಾಣದ ಗುಡ್ಡೆ ಕುಸಿದುದ್ದರಿಂದ ಮನೆಯು ಸಂಪೂರ್ಣವಾಗಿ ನೆಲಸಮಗೊಂಡಿದ್ದು ಮನೆಯಲ್ಲಿನ ಸಾಮಾಗ್ರಿಗಳು , ಖಡತೆಗಳೆಲ್ಲವು ಮಣ್ಣುಪಾಲಾಗಿದ್ದು ಅವುಗಳನ್ನು ವಿಟ್ಲ ತಣ್ಣೀರುಪಂತ ಅಳಕ್ಕೆ ಶಾಖೆಯ ಕಾರ್ಯಕರ್ತರ ಸಹಾಯದಿಂದ ಅಗೆದು ತೆಗೆಯುವಲ್ಲಿ ಶಮೀರ್ , ಮುಸ್ತಫಾ , ಆಸಿಫ್ , ನಿಝಾಂ , ಇಸ್ಮಾಯಿಲ್ , ಸತ್ತಾರ್ , ಫಾರೂಖ್,ಅನ್ಸಾರ್,ಶೌಕತ್ ಆಲಿ, ಸಿದ್ದೀಕ್ ಮದನಿ ಕುದ್ರಡ್ಕ ಸಹಕಾರಿಯಾಗಿ ಕುಟುಂಬದ , ಸ್ಥಳೀಯರ ಮೆಚ್ಚುಗೆಗೆ ಪಾತ್ರರಾದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ