ಮಂಗಳೂರು,ಸೆ.22: ಹನಿ ರಕ್ತಕ್ಕಾಗಿ ಅಂಗಲಾಚುವವರ ಆಸರೆಯಾದ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 200 ನೇ ಕ್ಯಾಂಪ್ 2020 ನವೆಂಬರ್ 8 ರಂದು ಕೆಜಿಎನ್ ಕ್ಯಾಂಪಸ್ ಮಿತ್ತೂರಿನಲ್ಲಿ ನಡೆಯಲಿರುವುದಾಗಿ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಘೋಷಿಸಿದರು.

ಕಳೆದ ಮೂರು ವರ್ಷಗಳಿಂದೀಚೆಗೆ ಕಾರ್ಯಾಚರಿಸುತ್ತಿರುವ ಬ್ಲಡ್ ಸೈಬೋ ಇದರ ಕಾರ್ಯಾಚರಣೆಯು ಶ್ಲಾಘನೀಯವಾಗಿದ್ದು, ರಕ್ತದಾನ ಮಾಡುವ ಮೂಲಕ ಹಲವರ ಜೀವರಕ್ಷಣೆ ಮಾಡಿದೆ ಎಂದು ಹೇಳಿದರು.

ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡಬೇಕೆಂದೂ, 200 ನೇ ಕ್ಯಾಂಪನ್ನು ಸಂಪೂರ್ಣವಾಗಿ ವಿಜಯಗೊಳಿಸಬೇಕೆಂದು ಸುಲ್ತಾನುಲ್ ಉಲಮಾ ಕಾಂತಪುರಂ ಉಸ್ತಾದ್ ಕರೆ ನೀಡಿದರು.






