ಜಿದ್ದಾ: ಸೌದಿ ಅರೇಬಿಯಾದ ಖಮೀಸ್ ಮುಶೈತ್ ನಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಜಾಫರ್ ಖಾನ್ ಎಂಬವರು ಇತ್ತೀಚೆಗೆ ಹೃದಯಾಘಾತದಲ್ಲಿ ನಿಧನರಾಗಿದ್ದರು.
ಮೃತ ವ್ಯಕ್ತಿಯ ದಫನ ಕಾರ್ಯಕ್ಕಾಗಿ ವಿಷಯವನ್ನು ತಿಳಿದು ಕೂಡಲೇ ಕಾರ್ಯಪ್ರವೃತ್ತರಾದ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಸದಸ್ಯರಾದ ಅಬ್ದುಲ್ ಮುಜೀಬ್ ಬೆಂಗಳೂರು ಹಾಗೂ ಅಸ್ಲಂ ಬೆಂಗಳೂರು ಅವರು ಕೂಡಲೇ ಕೆ ಸಿ ಎಫ್ ಖಮೀಸ್ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಅವರ ನೇತೃತ್ವದಲ್ಲಿ ಅವರ ಕುಟುಂಬಸ್ಥರನ್ನು ಸಂಪರ್ಕಿಸಿ ಮರಣೋತ್ತರ ಕ್ರಿಯೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಕ್ರೋಢೀಕರಿಸಿ ಅಬ್ದುಲ್ ರಝಾಕ್ ಮದೀನ ಅವರ ಸಹಕಾರದೊಂದಿಗೆ ಆಯಾ ಕಚೇರಿಗಳಿಗೆ ತಲುಪಿಸಿ ಮೃತದೇಹದ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಯಿತು.
ದಿನಾಂಕ 21/9/2017 ರಂದು ಕೆಸಿಎಫ್ ಕಾರ್ಯಕರ್ತರ ಸಹಕಾರದೊಂದಿಗೆ ಅಂತ್ಯಕ್ರಿಯೆಯನ್ನು ನಡೆಸಲಾಯಿತು.
ಈ ರೀತಿ ಹಲವಾರು ಸಾಂತ್ವನ ಸೇವೆಗಳಿಗೆ ನೇತೃತ್ವವನ್ನು ನೀಡುವ ಕೆಸಿಎಫ್ ಖಮೀಸ್ ಸೆಕ್ಟರ್ ಅಧ್ಯಕ್ಷರು ಹಾಗೂ ಸದಸ್ಯರ ಕಾರ್ಯ ಶ್ಲಾಘನೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ