ಬೆಂಗಳೂರು ,ಸೆ. 25: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ನಿನ್ನೆ ಅವಿಶ್ವಾಸ ನಿರ್ಣಯ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ನವರು ಹೀಗೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ. ಹೀಗೆ ಮಾಡುವುದರಿಂದ ನನಗೆ ಆರು ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇದಕ್ಕೆ ಕಾಂಗ್ರೆಸ್ನ 23 ಶಾಸಕರು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ಈ ಬಗ್ಗೆ ಕಾಂಗ್ರೆಸ್ಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಂಗ್ರೆಸ್ನವರು ನನಗೆ ವಿಶ್ವಾಸ ಮೂಡಿಸೋ ಕೆಲಸ ಮಾಡುತ್ತಿದ್ದಾರೆ. ಅವರು ಪ್ರತಿ 6 ತಿಂಗಳಿಗೊಮ್ಮೆ ಹೀಗೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿದ್ದರೆ ನನಗೆ ಸರ್ಕಾರದ ಮೇಲೆ ವಿಶ್ವಾಸ ಬರುತ್ತದೆ ಎಂದಿದ್ದಾರೆ.
ಮಂತ್ರಿ ಮಂಡಲದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವಿಶ್ವಾಸ ಮಂಡನೆಗೆ ನೋಟೀಸ್ ಕೊಟ್ಟಿದ್ದರು. ಬಳಿಕ ನಿನ್ನೆ ಸಂಜೆ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಅವಿಶ್ವಾಸ ನಿರ್ಣಯ ಮಂಡನೆ ಹಿನ್ನೆಲೆಯಲ್ಲಿ ಯಾವುದೇ ಬಿಲ್ ಪಾಸ್ ಮಾಡದಂತೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ