ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯಿಂದ ಸೆಪ್ಟೆಂಬರ್ 28ರಂದು ರಾತ್ರಿ ಝೋಮ್ ಮೂಲಕ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮ ನಡೆಸಲಾಯಿತು.
ಸಯ್ಯಿದ್ ಹಬೀಬುಲ್ಲಾಹ್ ಪೂಕೋಯ ಮದನಿ ಪೆರುವಾಯಿ ತಂಙಳ್ ರವರ ದುಆದೊಂದಿಗೆ ಆರಂಭಗೊಂಡ ಕಾರ್ಯಕ್ರದಮ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿಪಿ ಯೂಸುಫ್ ಸಖಾಫಿ ಬೈತಾರ್ ಉಸ್ತಾದರು ವಹಿಸಿದರು.
ಕೆಸಿಎಫ್ ಸಂಘಟನೆಯ ಬಗ್ಗೆ ಬೇಕಲ್ ಉಸ್ತಾದರು ಹೆಮ್ಮೆ ಪಡುತ್ತಿದ್ದರು. ಹಲವಾರು ಸಭೆ ಸಮಾರಂಭಗಳಲ್ಲಿ ಕೆಸಿಎಫ್ ಕಾರ್ಯಕರ್ತರ ಸಕ್ರೀಯತೆ ಹಾಗೂ ಶಿಸ್ತಿನ ಕಾರ್ಯಾಚರಣೆಯನ್ನು ಹಾಡಿ ಹೊಗಳುತ್ತಿದ್ದರು ಎಂದು ಜಾಮಿಯ ಸಅದಿಯ್ಯಾ ಅರಬಿಯ್ಯಾ ಕಾಸರಗೋಡು ಇದರ ಮುದರ್ರಿಸರಾದ ಹುಸೈನ್ ಸಅದಿ ಕೆ ಸಿ ರೋಡ್ ಉಸ್ತಾದರು ಅನುಸ್ಮರಣಾ ಭಾಷಣದಲ್ಲಿ ಹೇಳಿದರು.
ಸದ್ರಿ ಕಾರ್ಯಕ್ರಮದಲ್ಲಿ “ಪ್ರವಾದಿ ಹಾದಿಯಲ್ಲಿ ಗೆಲುವಿದೆ” ಎಂಬ ಅಭಿಯಾನವನ್ನು ಸಯ್ಯಿದ್ ಹಬೀಬುಲ್ಲಾಹ್ ಪೂಕೋಯ ಮದನಿ ಪೆರುವಾಯಿ ತಂಙಳ್ ರವರು ಘೋಷಣೆ ಮಾಡಿದರು. ಬೇಕಲ್ ಉಸ್ತಾದರ ಖಾದಿಮ್ ಆಗಿ ಸೇವೆ ಸಲ್ಲಿಸಲು ಭಾಗ್ಯ ದೊರೆತ ಇಸಾಕ್ ಬಾಅಹಸನಿ ಉಸ್ತಾದರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಸ್ತಾದರೊಂದಿಗಿನ ಅವರ ಅನುಭವಗಳನ್ನು ಹೇಳಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿ, ಇಹ್’ಸಾನ್ ಇಲಾಖೆಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ರೈಸ್ಕೋ, ಪ್ರಕಾಶನ ಇಲಾಖೆಯ ಕಾರ್ಯದರ್ಶಿ ನಝೀರ್ ಹಾಜಿ ಕಾಶಿಪಟ್ನ, ರಾಷ್ಟ್ರೀಯ ಸಮಿತಿ ನೇತಾರರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಅಬ್ದುಲ್ ಸಲಾಂ ಎಣ್ಮೂರುರವರು ಕಾರ್ಯಕ್ರಮ ನಿರೂಪಿಸಿದರು. ಸಿದ್ದೀಕ್ ಸಖಾಫಿ ಪೆರುವಾಯಿ ಉಸ್ತಾದರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಾಲಿಹ್ ಬೆಳ್ಳಾರೆ ಧನ್ಯವಾದ ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ