ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯಿಂದ ಸೆಪ್ಟೆಂಬರ್ 28ರಂದು ರಾತ್ರಿ ಝೋಮ್ ಮೂಲಕ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮ ನಡೆಸಲಾಯಿತು.
ಸಯ್ಯಿದ್ ಹಬೀಬುಲ್ಲಾಹ್ ಪೂಕೋಯ ಮದನಿ ಪೆರುವಾಯಿ ತಂಙಳ್ ರವರ ದುಆದೊಂದಿಗೆ ಆರಂಭಗೊಂಡ ಕಾರ್ಯಕ್ರದಮ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿಪಿ ಯೂಸುಫ್ ಸಖಾಫಿ ಬೈತಾರ್ ಉಸ್ತಾದರು ವಹಿಸಿದರು.
ಕೆಸಿಎಫ್ ಸಂಘಟನೆಯ ಬಗ್ಗೆ ಬೇಕಲ್ ಉಸ್ತಾದರು ಹೆಮ್ಮೆ ಪಡುತ್ತಿದ್ದರು. ಹಲವಾರು ಸಭೆ ಸಮಾರಂಭಗಳಲ್ಲಿ ಕೆಸಿಎಫ್ ಕಾರ್ಯಕರ್ತರ ಸಕ್ರೀಯತೆ ಹಾಗೂ ಶಿಸ್ತಿನ ಕಾರ್ಯಾಚರಣೆಯನ್ನು ಹಾಡಿ ಹೊಗಳುತ್ತಿದ್ದರು ಎಂದು ಜಾಮಿಯ ಸಅದಿಯ್ಯಾ ಅರಬಿಯ್ಯಾ ಕಾಸರಗೋಡು ಇದರ ಮುದರ್ರಿಸರಾದ ಹುಸೈನ್ ಸಅದಿ ಕೆ ಸಿ ರೋಡ್ ಉಸ್ತಾದರು ಅನುಸ್ಮರಣಾ ಭಾಷಣದಲ್ಲಿ ಹೇಳಿದರು.
ಸದ್ರಿ ಕಾರ್ಯಕ್ರಮದಲ್ಲಿ “ಪ್ರವಾದಿ ಹಾದಿಯಲ್ಲಿ ಗೆಲುವಿದೆ” ಎಂಬ ಅಭಿಯಾನವನ್ನು ಸಯ್ಯಿದ್ ಹಬೀಬುಲ್ಲಾಹ್ ಪೂಕೋಯ ಮದನಿ ಪೆರುವಾಯಿ ತಂಙಳ್ ರವರು ಘೋಷಣೆ ಮಾಡಿದರು. ಬೇಕಲ್ ಉಸ್ತಾದರ ಖಾದಿಮ್ ಆಗಿ ಸೇವೆ ಸಲ್ಲಿಸಲು ಭಾಗ್ಯ ದೊರೆತ ಇಸಾಕ್ ಬಾಅಹಸನಿ ಉಸ್ತಾದರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಸ್ತಾದರೊಂದಿಗಿನ ಅವರ ಅನುಭವಗಳನ್ನು ಹೇಳಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿ, ಇಹ್’ಸಾನ್ ಇಲಾಖೆಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ರೈಸ್ಕೋ, ಪ್ರಕಾಶನ ಇಲಾಖೆಯ ಕಾರ್ಯದರ್ಶಿ ನಝೀರ್ ಹಾಜಿ ಕಾಶಿಪಟ್ನ, ರಾಷ್ಟ್ರೀಯ ಸಮಿತಿ ನೇತಾರರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಅಬ್ದುಲ್ ಸಲಾಂ ಎಣ್ಮೂರುರವರು ಕಾರ್ಯಕ್ರಮ ನಿರೂಪಿಸಿದರು. ಸಿದ್ದೀಕ್ ಸಖಾಫಿ ಪೆರುವಾಯಿ ಉಸ್ತಾದರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಾಲಿಹ್ ಬೆಳ್ಳಾರೆ ಧನ್ಯವಾದ ಹೇಳಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ