ಸೌದಿ ಅರೇಬಿಯಾದ ಸೂಪರ್ ಮಾರ್ಕೆಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಪಂಜಾಬಿನ ನಜಮ್ ಖಾನ್ ರವರು, ಕಳೆದ ಸೆಪ್ಟೆಂಬರ್ ನಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಜ್ಞೆ ಕಳಕೊಂಡ ಅವರು ಸರಿಸುಮಾರು ಹತ್ತು ತಿಂಗಳುಗಳ ಕಾಲ ಕೋಮಾ ಸ್ಥಿತಿಯಲ್ಲೇ ಮುಂದುವರಿದಿದ್ದರು.
ಎರಡು ತಿಂಗಳ ಹಿಂದೆ ಈ ವಿಷಯ ಕೆಸಿಎಫ್ ಕಾರ್ಯಕರ್ತರ ಗಮನಕ್ಕೆ ಬಂದು, ವಿಚಾರಿಸಿದಾಗ ಖಾನ್ ರವರು ಊರಿಗೆ ಮರಳುವ ಅವಶ್ಯಕತೆ ಇದುವುದಾಗಿ ತಿಳಿಯಿತು.

ಆದರೆ ಹತ್ತು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಸರಿಸುಮಾರು ಒಂದು ಕೋಟಿ ರೂಪಾಯಿಯಷ್ಟು ಆಸ್ಪತ್ರೆಯ ಬಿಲ್ ಪಾವತಿಸಲು ಬಾಕಿ ಉಳಿದಿತ್ತು.
ಈ ಕುರಿತು ಕೆಸಿಎಫ್ ನೇತಾರರಾದ ಮುಹಮ್ಮದ್ ಮಲಬೆಟ್ಟು ಹಾಗೂ ಬಾಷಾ ಗಂಗಾವಳಿಯವರು ಆಸ್ಪತ್ರೆಯ ಅಧಿಕೃತರೊಂದಿಗೆ ಖಾನ್ ಅವರ ಪರಿಸ್ಥಿತಿಯನ್ನು ವಿವರಿಸಿದ ಹಿನ್ನೆಲೆಯಲ್ಲಿ ಖಾನ್ ಅವರಿಂದ ಹಣ ವಸೂಲು ಮಾಡದೆ, ಆಸ್ಪತ್ರೆಯ ವೆಚ್ಚವನ್ನು ಕಾನೂನಿನ ನೆರವಿನಿಂದ ಪಡೆಯುವುದಾಗಿ ತಿಳಿಸಿ ಖಾನ್ ರನ್ನು ಡಿಸ್ಚಾರ್ಜ್ ಮಾಡಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಗೊಂಡರೂ ಕೋವಿಡ್ ಕಾರಣದಿಂದಾಗಿ ಸೌದಿಯಿಂದ ದೆಹಲಿಗೆ ವಿಮಾನಯಾನ ಇಲ್ಲದ ತೊಂದರೆಯೂ ಎದುರಾಯಿತು. ಇದರ ಪರಿಹಾರಕ್ಕಾಗಿ ಕೆಸಿಎಫ್ ನೇತಾರರು ಸಂಗರೂರ್ ಸಂಸದರಾದ ಭಗ್ವಂತ್ ಮನ್ನ್ ಅವರನ್ನು ಹಾಗೂ ಸೌದಿಯಲ್ಲಿರುವ ಭಾರತದ ರಾಯಭಾರಿ ಕಚೇರಿಯನ್ನೂ ಸಂಪರ್ಕಿಸಿದರು.
ರಾಯಭಾರಿ ಕಚೇರಿಯ ಅಬ್ದುಲ್ ಅಝೀಝ್ ಪವಿತ್ರ ಗ್ರೂಪ್ ಹಾಗೂ ಸಯ್ಯಿದ್ ರವರ ಸಹಕಾರದಿಂದ ದಮ್ಮಾಮಿನಿಂದ ದೆಹಲಿಗೆ ಹೋಗುವ ವಿಮಾನದಲ್ಲಿ ಖಾನ್ ಅವರನ್ನು ಕಳುಹಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ಪಂಜಾಬಿಗೆ ತಲುಪಿಸುವುದರಲ್ಲಿ ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಯಶಸ್ವಿಯಾಗಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ