ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ಹೆಚ್ಚಿನ ರಾಜ್ಯಗಳಲ್ಲಿ ಸ್ಥಿರವಾಗಿರುವುದರಿಂದ ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿರುವ ನೀತಿ ಆಯೋಗದ ಸದಸ್ಯ ವಿ. ಕೆ. ಪೌಲ್, ಚಳಿಗಾಲದಲ್ಲಿ ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿ ಹಾಕಿಲ್ಲ.
ದೇಶದಲ್ಲಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವ ತಜ್ಞರ ಸಮನ್ವಯದ ಮುಖ್ಯಸ್ಥರೂ ಆಗಿರುವ ಪೌಲ್, ಒಮ್ಮೆ ಕೋವಿಡ್-19 ಲಸಿಕೆ ಲಭ್ಯವಾದರೆ, ಅದನ್ನು ನಾಗರಿಕರಿಗೆ ತಲುಪಿಸಲು ಸಾಕಷ್ಟು ಸಂಪನ್ಮೂಲಗಳಿವೆ ಎಂದು ಹೇಳಿದರು.
ದೇಶದಲ್ಲಿ ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವಿನ ಪ್ರಕರಣಗಳ ಸಂಖ್ಯೆ ಕುಸಿದಿದೆ.ಆದರೂ, ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸ್ ಗಢ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮತ್ತು ಮೂರ್ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಲೂ ಸಹ ಸೋಂಕು ಹೆಚ್ಚಾಗುತ್ತಿದೆ ಎಂದು ಪೌಲ್ ತಿಳಿಸಿದರು.
ಪೌಲ್ ಪ್ರಕಾರ, ದೇಶ ಈಗ ಸ್ವಲ್ಪ ಉತ್ತಮ ಸ್ಥಿತಿಯಲ್ಲಿದೆ ಆದರೆ, ದೇಶವು ಇನ್ನೂ ಬಹಳ ದೂರ ಸಾಗಬೇಕಿದೆ ಏಕೆಂದರೆ ಶೇ. 90 ರಷ್ಟು ಜನರು ಇನ್ನೂ ಕೊರೋನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ.
ಚಳಿಗಾಲದ ಆರಂಭದೊಂದಿಗೆ ಎರಡನೇ ಅಲೆಯನ್ನು ನೋಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಪೌಲ್, ಯುರೋಪಿನ ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಕಂಡುಬರುತ್ತಿರುವುದನ್ನು ನೋಡುತ್ತಿದ್ದೇವೆ. ದೇಶದಲ್ಲಿ ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.ಈ ಸೋಂಕಿನ ಬಗ್ಗೆ ಇನ್ನೂ ತಿಳಿಯುತ್ತಿರುವುದಾಗಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ