ಸೌದಿ ಅರೇಬಿಯಾ: ಇಲ್ಲಿನ ಖಮೀಸ್ ಮುಶೈತ್ ನಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮೂಲದ ಸಮೀವುಲ್ಲಾ ಖಾನ್ ಎಂಬವರು ಅ.29ರಂದು ನಿಧನರಾಗಿದ್ದರು. ಈ ವಿಷಯ ತಿಳಿದು ಕೆ. ಸಿ. ಎಫ್ ಖಮೀಸ್ ಮುಶೈತ್ ಸೆಕ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಬನ್ನೂರು ರವರು ತಕ್ಷಣ ಕಾರ್ಯಪ್ರವೃತ್ತರಾಗಿ ಮರಣೋತ್ತರ ಕ್ರಿಯೆಗೆ ಅಗತ್ಯವಿರುವ ಎಲ್ಲಾ ದಾಖಲೆ ಪತ್ರಗಳನ್ನು ಕ್ರೋಢೀಕರಿಸಿ, ಬೇಕಾದ ಕಚೇರಿಗಳಿಗೆ ತಲುಪಿಸಿ ದಫನ ಕಾರ್ಯವನ್ನು ನಡೆಸಲು ಸಿದ್ಧತೆಯನ್ನು ಮಾಡಿದರು.
ನ.1ರಂದು ಅಸರ್ ನಮಾಜಿನ ಬಳಿಕ ಖಮೀಸ್ ಮುಶೈತ್ ನ ಖಬರಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೆ. ಸಿ. ಎಫ್ನ ಅಬೂಬಕ್ಕರ್ ಪುರಷರಕಟ್ಟೆ, ಖಾಲೀದ್ ಕಬಕ ಸಹಿತ ಹಲವು ಕಾರ್ಯಕರ್ತರು ಹಾಗೂ ಮೃತರ ಕುಟುಂಬಸ್ಥರು ಉಪಸ್ಥಿತರಿದ್ದರು.
ಲಾಕ್ಡೌನ್ ಸಂದರ್ಭಗಳಲ್ಲಿ ಕೆ.ಸಿ.ಎಫ್ ಖಮೀಸ್ ಮುಶೈತ್ ಸೆಕ್ಟರ್ನ ಅಧ್ಯಕ್ಷ ಅಬ್ದುಲ್ ರಝಾಕ್ ಬನ್ನೂರು ರವರ ನೇತೃತ್ವದಲ್ಲಿ ಹಲವಾರು ವಿಶೇಷ ಸಾಮಾಜಿಕ ಸೇವೆ, ಸಾಂತ್ವನ ಕಾರ್ಯಗಳು ನಡೆಯುತ್ತಲೆ ಬರುತ್ತಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿವೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ