ಮಿತ್ತೂರು: ಅಶ್ಶಮಾಯಿಲುಲ್ ಮುಹಮ್ಮದಿಯ್ಯ ಆರು ತಿಂಗಳ ವಿಶೇಷ ಕೋರ್ಸ್ ನಲ್ಲಿ ವಿಜೇತರಾದ ಪ್ರಥಮ ಬ್ಯಾಚ್ ಗೆ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮ ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್ ಕೆ.ಜಿ.ಎನ್ ಮಿತ್ತೂರಿನಲ್ಲಿ ಭಾನುವಾರ ನಡೆಯಿತು.
ಉಡುಪಿ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್(ಮಾಣಿ ಉಸ್ತಾದ್) ಅವರು 39 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು. 17 ವಿದ್ಯಾರ್ಥಿಗಳಿಗೆ ಶಾಮಿಲಿ ಪದವಿ ಹಾಗೂ 23 ವಿದ್ಯಾರ್ಥಿನಿಯರಿಗೆ ಶಾಮಿಲ ಪದವಿಯೊಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಇದೇ ವೇಳೆ ಈ ತರಗತಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ತೇರ್ಗಡೆಯಾದ ಪುರುಷರ ವಿಭಾಗದಲ್ಲಿ ಇಬ್ಬರಿಗೆ ಹಾಗೂ ಮಹಿಳೆಯರ ವಿಭಾಗದ ಇಬ್ಬರಿಗೆ ಮಾಣಿ ಉಸ್ತಾದ್ ಅವರು ಬಹುಮಾನ ನೀಡಿ ಹಾರೈಸಿದರು. ಈ ವೇಳೆ ದಾರುಲ್ ಇರ್ಶಾದ್ ದಅವಾ ಕಾಲೇಜು ಪ್ರಾನ್ಸುಪಾಲ ಸಯ್ಯಿದ್ ಸ್ವಲಾಹುದ್ದೀನ್ ಅದನಿ ಹಾಗೂ ಅಶ್ಶಮಾಯಿಲ್ ಮುಹಮ್ಮದಿಯ್ಯ ವಿಶೇಷ ಕೋರ್ಸ್ ಅಧ್ಯಾಪಕ ಇಸ್ಮಾಈಲ್ ಸಅದಿ ಮಾಚಾರ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ