ಮೈಸೂರು: ಮುಂದಿನ ನಾಲ್ಕೈದು ವಾರದೊಳಗಾಗಿ ಕೊರೊನಾಗೆ ಲಸಿಕೆ ಬರಬಹುದು. ಹೀಗಾಗಿ, ಜಿಲ್ಲಾಮಟ್ಟದಲ್ಲಿ ಲಸಿಕೆ ಹಂಚಲು ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಎರಡು ದಿನಗಳ ಪ್ರವಾಸಕ್ಕೆ ಆಗಮಿಸಿರುವ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾಗೆ ಲಸಿಕೆ ಹಂಚಲು ಸಿದ್ಧತೆ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ಮಂಗಳವಾರ ಹಲವು ರಾಜ್ಯಗಳ ಸಿಎಂ ಸಭೆ ಕರೆದಿದ್ದರು. ಇದರಲ್ಲಿ ಕೊರೊನಾ ಲಸಿಕೆ ವಿಚಾರವಾಗಿಯೇ ತಿಳಿಸಿದ್ದಾರೆ ಎಂದರು.
ಸಭೆಯಲ್ಲಿ ಪ್ರಧಾನಿ ಕೊರೊನಾ ಲಸಿಕೆ ನಾಲ್ಕು ವಾರದೊಳಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಕೊರೊನಾ ಲಸಿಕೆಯ ಹಂಚಿಕೆ ವಿಚಾರವಾಗಿ ಬೇಕಾದ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ನಾವು ಸಹ ಜಿಲ್ಲಾಮಟ್ಟದಲ್ಲಿ ಲಸಿಕೆ ಹಂಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅಲ್ಲದೇ ಬೇಕಾದ ತಯಾರಿ ನಡೆದಿದೆ ಎಂದು ತಿಳಿಸಿದರು.
ನಗರದ ನಜರ್ಬಾದ್ನ ಕುಪ್ಪಣ್ಣ ಉದ್ಯಾನ ಮತ್ತು ಮಕ್ಕಳ ಉದ್ಯಾನದ ನಡುವೆ ನಿರ್ಮಾಣವಾಗಿರುವ ಮೈಸೂರಿನ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಹಾಗೂ ಪೊಲೀಸ್ ವಸತಿ ಗೃಹಗಳನ್ನು ಮಂಗಳವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ