ಹೂವಿನ ಹಡಗಲಿ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ನಾಯಕರ ಜಿಲ್ಲಾ ಭೇಟಿ VOYAGE ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಸಮಾರೋಪ ಗೊಂಡಿತು.

ಎಸ್ಸೆಸ್ಸೆಫ್ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕ, ಹೂವಿನ ಹಡಗಲಿ ಪುರಸಭೆಯ ನೂತನ ಅಧ್ಯಕ್ಷ, ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ವಾರದ ಗೌಸ್ ಮೊಹಿದ್ದೀನ್ ಸಾಹೇಬ್ ಉದ್ಘಾಟಿಸಿದರು.

ಎಸ್ಸೆಸ್ಸೆಫ್ ಹಾಗೂ ಮುಸ್ಲಿಂ ಜಮಾಅತ್ ರಾಜ್ಯದಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಶ್ಲಾಘಿಸಿದ ವಾರದ ಗೌಸ್ ರವರು ಈ ಸಂಘಟನೆಯನ್ನು ಪ್ರತಿ ಹಳ್ಳಿ ಗಲ್ಲಿಗಳಲ್ಲಿ ಕಟ್ಟಿ ಬೆಳೆಸಬೇಕಾಗಿದೆ ಎಂದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು, ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ, ಕಾರ್ಯದರ್ಶಿ ಮುಸ್ತಫಾ ನಈಮಿ ಹಾವೇರಿ, ರಫೀಕ್ ಮಾಸ್ಟರ್ ಕೊಡಗು , ಹೂವಿನ ಹಡಗಲಿಯ ಶೈಖ್ ಅಹ್ಮದ್ ಸಾರ್ ಹಾಗೂ ಸಫ್ವಾನ್ ಜೌಹರಿ ಮಾತನಾಡಿದರು.

ರಾಜ್ಯ ನಾಯಕರಾದ ಮುಬಶ್ಶಿರ್ ಅಹ್ಸನಿ, ಅಶ್ರಫ್ ಅಮ್ಜದಿ ಉಡುಪಿ, ಶರೀಫ್ ಕೊಡಗು, ಸಫ್ವಾನ್ ಚಿಕ್ಕಮಗಳೂರು, ಮುನೀರ್ ಮದನಿ ಮೈಸೂರು, ಕಬೀರ್ ಅಮ್ಜದಿ, ಸಿದ್ದೀಕ್ ಸಖಾಫಿ, ಇಸ್ಹಾಖ್ ಸಖಾಫಿ ಹಾಗೂ ಅಬೂಬಕರ್ ಸಖಾಫಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ