ಮಂಗಳೂರು,ಡಿ. 7: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನ ಮುಂದಿಟ್ಟು ದೇಶಾದ್ಯಂತ ವಿವಿಧ ರೈತ ಸಂಘಟನೆಗಳು ಡಿ. 8, ನಾಳೆ ಭಾರತ್ ಬಂದ್ಗೆ ಕರೆ ನೀಡಿವೆ. ರೈತರ ಈ ಹೋರಾಟಕ್ಕೆ ವಿವಿಧ ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳೂ ಕೂಡ ಬೆಂಬಲ ನೀಡಿವೆ.
ಕೇಂದ್ರ ಸರಕಾರದ ರೈತ ವಿರೋಧಿ ಫಾರ್ಮರ್ಸ್ ಬಿಲ್ ವಿರೋಧಿಸಿ ರೈತರು ಆಯೋಜಿಸಿರುವ ಭಾರತ್ ಬಂದ್ ಪ್ರತಿಭಟನೆಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ನೀಡುತ್ತಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
ಪಂಜಾಬ್ ರೈತರು ಈ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಸತತ 13 ದಿನಗಳಿಂದಲೂ ನಿರಂತರವಾಗಿ ಪ್ರತಿಭಟನೆಗಳನ್ನ ಮಾಡುತ್ತಾ ಬಂದಿದ್ದಾರೆ. ರೈತರ ಜೊತೆ ಕೇಂದ್ರ ಸರ್ಕಾರ ನಡೆಸಿದ ಹಲವು ಸುತ್ತುಗಳ ಸಂಧಾನ ಸಭೆಗಳು ವಿಫಲವಾಗಿವೆ. ಎಂಎಸ್ಪಿಯನ್ನ ಲಿಖಿತವಾಗಿ ಅಳವಡಿಸುವ ಕೇಂದ್ರದ ಭರವಸೆ ರೈತರಿಗೆ ಸಮಾಧಾನ ತಂದಿಲ್ಲ. ಕೃಷಿ ಕಾಯ್ದೆಗಳನ್ನ ಕೈಬಿಡುವವರೆಗೂ ರೈತ ಸಂಘಟನೆಗಳ ಹೋರಾಟ ಮುಂದುವರಿಯುವ ಎಲ್ಲಾ ಸಾಧ್ಯತೆ ಇದೆ.
ಮೊನ್ನೆ ನಡೆದ ಕರ್ನಾಟಕ ಬಂದ್ ನ ನೇತೃತ್ವ ವಹಿಸಿದ್ದ ವಾಟಾಳ್ ನಾಗರಾಜ್ ಅವರ ಕನ್ನಡಪರ ಸಂಘಟನೆಗಳ ಒಕ್ಕೂಟ ಇದೀಗ ಭಾರತ್ ಬಂದ್ಗೂ ಬೆಂಬಲ ಘೋಷಿಸಿದೆ. ಬೀದಿ ಬದಿ ವ್ಯಾಪಾರಿಗಳ ಸಂಘ ಕೂಡ ರೈತರ ಹೋರಾಟಕ್ಕೆ ಕೈಜೋಡಿಸಿದೆ. ಶಾಲೆಗಳನ್ನ ತೆರೆಯುವ ವಿಚಾರದಲ್ಲಿ ಸರ್ಕಾರದ ನೀತಿ ಬಗ್ಗೆ ಅಸಮಾಧಾನ ಹೊಂದಿರುವ ಖಾಸಗಿ ಶಾಲೆಗಳ ಒಕ್ಕೂಟ ಕೂಡ ನಾಳೆಯ ರೈತರ ಹೋರಾಟಕ್ಕೆ ಬೆಂಬಲ ನೀಡಿದೆ. ನಾಳೆ ಒಂದು ದಿನದ ಮಟ್ಟಿಗೆ ಆನ್ಲೈನ್ ತರಗತಿಗಳನ್ನ ಶಾಲೆಗಳು ರದ್ದು ಮಾಡಿ ಬಂದ್ನಲ್ಲಿ ಭಾಗವಹಿಸಲಿವೆ ಎಂಬ ಮಾಹಿತಿ ತಿಳಿದುಬಂದಿದೆ. ಕಮ್ಯೂನಿಸ್ಟ್ ಪಕ್ಷಕ್ಕೆ ಸೇರಿದ ಅಖಿಲ ಭಾರತ ವ್ಯಾಪಾರ ಒಕ್ಕೂಟ ಸಂಘಟನೆ ಎಐಟಿಯುಸಿ ನಾಳೆಯ ಬಂದ್ಗೆ ಸಂಪೂರ್ಣ ಬೆಂಬಲ ನೀಡಿದೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್