ಎಲ್ಲರೂ ತಿಳಿದಿರುವಂತೆ ರೈತರು ಅಶಕ್ತ ಜಾನುವಾರುಗಳನ್ನು ಮಾತ್ರ ಮಾರಾಟ ಮಾಡುತ್ತಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ರೈತರು ಏನು ಮಾಡಬೇಕು? ಇದರಿಂದ ಅವರಿಗೆ ಹೊರೆಯಾಗುವುದು ನಿಜ. ರೈತರು ತಮ್ಮ ಜಾನುವಾರುಗಳೊಂದಿಗೆ ಯಾವುದೇ ರೀತಿಯ ಭಾವನಾತ್ಮಕ ನಂಟು ಇಟ್ಟುಕೊಂಡಿರುವುದಿಲ್ಲ.
ಮೈಸೂರು: ಗೋಮಾಂಸ ರಫ್ತು ಮಾಡುವವರಲ್ಲಿ ಮೇಲ್ವರ್ಗದ ಬ್ರಾಹ್ಮಣರೇ ಹೆಚ್ಚಾಗಿದ್ದಾರೆ ಎಂದು ಪ್ರೊಫೆಸರ್ ಕೆ. ಎಸ್.ಭಗವಾನ್ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಜ್ಞ – ಯಾಗಾದಿಗಳಿಗೂ ಗೋವುಗಳನ್ನು ಕೊಲ್ಲಲಾಗುತ್ತಿತ್ತು. ಬ್ರಾಹ್ಮಣರೂ ಕೂಡಾ ದನದ ಮಾಂಸ ತಿನ್ನುತ್ತಿದ್ದರೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಯಾವುದೇ ಚರ್ಚೆಯನ್ನು ನಡೆಸದೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿರುವುದು ಸರಿಯಲ್ಲ ಎಂದು ಭಗವಾನ್ ಅಭಿಪ್ರಾಯಪಟ್ಟರು.
ಎಲ್ಲರೂ ತಿಳಿದಿರುವಂತೆ ರೈತರು ಅಶಕ್ತ ಜಾನುವಾರುಗಳನ್ನು ಮಾತ್ರ ಮಾರಾಟ ಮಾಡುತ್ತಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ರೈತರು ಏನು ಮಾಡಬೇಕು? ಇದರಿಂದ ಅವರಿಗೆ ಹೊರೆಯಾಗುವುದು ನಿಜ. ರೈತರು ತಮ್ಮ ಜಾನುವಾರುಗಳೊಂದಿಗೆ ಯಾವುದೇ ರೀತಿಯ ಭಾವನಾತ್ಮಕ ನಂಟು ಇಟ್ಟುಕೊಂಡಿರುವುದಿಲ್ಲ. ಅಮೆರಿಕಾದಲ್ಲಿ ಕೊಲ್ಲಲೆಂದೇ ದನಗಳನ್ನು ಸಾಕುತ್ತಾರೆ. ಹೀಗಿರುವಾಗ ರಾಜ್ಯದಲ್ಲಿ ಯಾವುದೇ ಚರ್ಚೆಯನ್ನು ನಡೆಸದೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಭಗವಾನ್ ಕಿಡಿಕಾರಿದರು.
ಶೂದ್ರರನ್ನು ಶೂದ್ರರೆಂದು ಕರೆದರೆ ಸಂತಸ ಪಡಬೇಕು ಎಂಬ ಹೇಳಿಕೆ ನೀಡಿದ ಸಂಸದೆ ಪ್ರಗ್ಯಾ ಠಾಕೂರ್ ಹೇಳಿಕೆಯನ್ನು ಖಂಡಿಸಿದ ಭಗವಾನ್, ಪ್ರಗ್ಯಾ ಠಾಕೂರ್ಗೆ ಹಿಂದೂ ಧರ್ಮದ ಬಗ್ಗೆಯೇ ಅರಿವಿಲ್ಲ ಎಂದರು. ಹಿಂದೂ ಧರ್ಮವೆಂದರೆ ಕೇವಲ ಬ್ರಾಹ್ಮಣರ ಧರ್ಮವೇ ಹೊರತು, ಬೇರೆಯವರ ಧರ್ಮವಲ್ಲ. ಜನಿವಾರ ಹಾಕಿಕೊಳ್ಳದವರೆಲ್ಲರೂ ಶೂದ್ರರು ಎಂದು ಮನುಸ್ಮೃತಿಯಲ್ಲಿ ಉಲ್ಲೇಖವಾಗಿದೆ. ಅದರ ಪ್ರಕಾರ ಒಕ್ಕಲಿಗರು, ಲಿಂಗಾಯತರು, ಕುರುಬರು, ಉಪ್ಪಾರರು, ನಾಯಕರು ಹಾಗೂ ದಲಿತರೆಲ್ಲರೂ ಶೂದ್ರರೇ ಆಗಿದ್ದಾರೆ ಎಂದು ಭಗವಾನ್ ಅಭಿಪ್ರಾಯಪಟ್ಟರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಚಾರವಾದರೆ ನಾನೇ ಈ ಮಾತನ್ನು ಹೇಳಿದ್ದೇನೆಂದುಕೊಂಡು ನನ್ನನ್ನು ಕೊಲ್ಲುವುದಾಗಿ, ಹೊಡೆಯುವುದಾಗಿ ಬೆದರಿಕೆ ಹಾಕುತ್ತಾರೆ. ಇದು ಸರಿಯಲ್ಲ ಎಂದು ಭಗವಾನ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ