ಲಕ್ನೋ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿದೆ. ಮಂದಿರ ನಿರ್ಮಾಣಕ್ಕಾಗಿ ಅಡಿಪಾಯ ಹಾಕುವುದಕ್ಕೆ ಗುರುತಿಸಲಾಗಿರುವ ಪ್ರದೇಶದ ಕೆಳಭಾಗದಲ್ಲಿ ಸರಯೂ ನದಿ ತೊರೆ ಇದ್ದು, ಯೋಜನಾ ಸಾಧ್ಯತೆಗೆ ಅಡ್ಡಿ ಉಂಟಾಗಿದೆ.
ಅಡಿಪಾಯ ಸ್ತಂಭಗಳ ಮೇಲೆ ಸುಮಾರು 700 ಟನ್ಗಳಷ್ಟು ಭಾರ ಇಟ್ಟಾಗ ಸ್ತಂಭ ಸುಮಾರು 4 ಇಂಚಿನಷ್ಟು ಕುಸಿದಿದೆ. ಅಲ್ಲದೆ ಸ್ತಂಭಗಳಲ್ಲಿ ಬಿರುಕು ಬಿಟ್ಟ ಸೂಚನೆ ಕಂಡುಬಂದಿದೆ. ಈ ಪ್ರದೇಶ ಭೂಕಂಪ ವಲಯದಲ್ಲಿರುವುದರಿಂದ ರಚನಾತ್ಮಕವಾಗಿ ಸುರಕ್ಷಿತ ಮಾದರಿಯನ್ನು ರೂಪಿಸುವ ನಿರ್ಧಾರಕ್ಕೆ ಬರಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದೇವಾಲಯ ನಿರ್ಮಾಣದ ಸಮಿತಿಯ ಅಧ್ಯಕ್ಷರಾಗಿರುವ ನೃಪೇಂದ್ರ ಮಿಶ್ರಾ ಈ ಸಂಬಂಧ ಸಭೆ ನಡೆಸಿದ್ದಾರೆ. ದೇವಾಲಯ ನಿರ್ಮಾಣಕ್ಕಾಗಿ ಈಗ ಸಿದ್ಧವಾಗಿರುವ ಅಡಿಪಾಯದ ಮಾದರಿ ಕಾರ್ಯಸಾಧುವಲ್ಲ ಎಂಬುದು ಸಭೆಯಲ್ಲಿ ಸ್ಪಷ್ಟವಾಗಿದ್ದು ಬಲಿಷ್ಠ ಅಡಿಪಾಯಕ್ಕಾಗಿ ಬೇರೆಯ ಮಾದರಿಯನ್ನು ಸೂಚಿಸುವಂತೆ ಐಐಟಿಗಳಿಗೆ ಮನವಿ ಮಾಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ