janadhvani

Kannada Online News Paper

ಎಸ್ಸೆಸ್ಸೆಫ್ : ಮೈಸೂರು ಜಿಲ್ಲೆಗೆ ರಾಜ್ಯ ನಾಯಕರ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ನಾಯಕರ ಜಿಲ್ಲಾ ಸಂದರ್ಶನ ಹಾಗೂ ಸಮಾಲೋಚನೆ ಇಂದು ಮೈಸೂರಿನ ಕ್ಯಾತಮಾರನಹಳ್ಳಿ ಗುಲ್ಶನೇ ಪಂಜ್‌ದನ್ ಮದ್ರಸಾ ಸಭಾಂಗಣದಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು ಉದ್ಘಾಟಿಸಿದರು. ಮೈಸೂರು ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷ ಮೌಲಾನಾ ಫಾರೂಖ್ ಸುಬ್‌ಹಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯ ಎಸ್ಸೆಸ್ಸೆಫ್ ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ, ಕಾರ್ಯದರ್ಶಿ ಅಶ್ರಫ್ ರಝಾ ಅಮ್ಜದಿ, ರಾಜ್ಯ ನಾಯಕರಾದ ಸಫ್ವಾನ್ ಚಿಕ್ಕಮಗಳೂರು, ಕಬೀರ್ ಅಮ್ಜದಿ, ಇಮ್ರಾನ್ ಸುಲ್ತಾನಿ ಮೈಸೂರು ಉಪಸ್ಥಿತರಿದ್ದರು.

ಮೈಸೂರು ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಿಷ್ಠಗೊಳಿಸುವ ಬಗ್ಗೆ ಚರ್ಚೆ ಮಾಡಲಾಯಿತು. ಎಸ್ಸೆಸ್ಸೆಫ್ ರಾಜ್ಯ ನಾಯಕ ಮುನೀರ್ ಮದನಿ ಮೈಸೂರು ಕಾರ್ಯಕ್ರಮವನ್ನು ನಿರೂಪಿಸಿದರು.