ದುಬೈ: ಕೋವಿಡ್-19 ಕಾರಣದಿಂದ ಸೌದಿ ಅರೇಬಿಯಾ ತಲುಪಲು ಅಸಾಧ್ಯವಾದ ಕಾರಣ ಯುಎಇ ಮೂಲಕ ಹೋಗಲು ದುಬೈ ತಲುಪಿದ್ದ ಹಲವಾರು ಭಾರತೀಯರನ್ನು ಕೆಸಿಎಫ್ ಯುಎಇ ತಂಡವು ಎರಡು ಬಸ್ ವ್ಯವಸ್ಥೆಗೊಳಿಸಿ ದಮ್ಮಾಮ್ ಮತ್ತು ರಿಯಾದ್ ಗೆ ತಲುಪಿಸಿಕೊಡುವಲ್ಲಿ ಯಶಸ್ವಿಯಾಗಿದೆ.
ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು, ಕೆಸಿಎಫ್ ದುಬೈ ನಾರ್ತ್ ಝೋನ್ ಅಧ್ಯಕ್ಷರಾದ ಇಸ್ಮಾಯಿಲ್ ಮದನಿನಗರ ಸೇರಿದಂತೆ ಹಲವು ನಾಯಕರು ನೇತೃತ್ವ ನೀಡಿದ್ದರು.

ಅನಿವಾಸಿ ಭಾರತೀಯರ ಸಂಕಷ್ಟಗಳಿಗೆ ಮಿಡಿಯುವ ಕರ್ನಾಟಕ ಕಲ್ಚರಲ್ ಫೌಂಡೇಶನ್ ಯುಎಇಯು ಕೋವಿಡ್-19 ಸಂದರ್ಭದಲ್ಲಿ ಹತ್ತರಷ್ಟು ಚಾರ್ಟರ್ ವಿಮಾನ ವ್ಯವಸ್ಥೆಗೊಳಿಸುವ ಮೂಲಕ ಸಂಕಷ್ಟಕ್ಕೊಳಗಾದ ಎರಡು ಸಾವಿರದಷ್ಟು ಅನಿವಾಸಿ ಕನ್ನಡಿಗರನ್ನು ತಾಯ್ನಾಡಿಗೆ ತಲುಪಿಸಿಕೊಡುವಲ್ಲಿ ಯಶಸ್ವಿಯಾಗಿತ್ತು.
ಗಲ್ಫ್ ಮತ್ತು ಯೂರೋಪ್ ರಾಷ್ಟ್ರಗಳಲ್ಲಿ ಅನಿವಾಸಿ ಕನ್ನಡಿಗರ ಭರವಸೆಯ ಬೆಳಕಾಗಿ ಕೆಸಿಎಫ್ ಕಾರ್ಯಾಚರಿಸುತ್ತಿದ್ದು ಸಾಮಾಜಿಕ ಶೈಕ್ಷಣಿಕ ಸಾಮುದಾಯಿಕ ಕಾರ್ಯಯೋಜನೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಕೆಸಿಎಫ್ ಉತ್ತಮವಾದ ಸಂಘಟನಾ ನೆಟ್ವರ್ಕ್ ಹೊಂದಿದ್ದು ಯುಎಇಯ ಎಲ್ಲಾ ಎಮಿರೇಟ್ಸ್ ಗಳಲ್ಲೂ 24/7 ಕಾರ್ಯಕರ್ತರು ಸಹಾಯಕ್ಕೆ ಸಜ್ಜಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ