ಮಂಗಳೂರು,ಜ.15: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಇಂದು ಅಪರಾಹ್ನ,ಮಂಗಳೂರು ಪುರ ಭವನ ಪಕ್ಕದ ಕ್ಲಾಕ್ ಟವರ್ ರಸ್ತೆಯಾದ್ಯಂತ ದ.ಕ ಜಿಲ್ಲೆ ಪೊಲೀಸ್ ತಾರತಮ್ಯ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಯಿತು.
ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉಜಿರೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಕಾರ್ಯಕರ್ತರು ದೇಶದ್ರೋಹಿ ಘೋಷಣೆ ಕೂಗಿದ್ದಾರೆಂಬ ಆರೋಪದಲ್ಲಿ,ದ.ಕ.ಪೊಲೀಸರು ಎಸ್. ಡಿ. ಪಿ.ಐ. ಕಾರ್ಯಕರ್ತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿ ಜೈಲಿಗೆ ಹಾಕಿದ ವಿಷಯದಲ್ಲಿ, ದ.ಕ.ಜಿಲ್ಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಆರೋಪಿಸಿ,ಪೊಲೀಸರ ತಾರತಮ್ಯ ನೀತಿ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಯಿತು.

ಮುಂದುವರಿದು, ಉಜಿರೆಯಲ್ಲಿ ನೈಜವಾಗಿ ದೇಶ ದ್ರೋಹಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನೆಂದು ಹೇಳಲಾದ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ನೈಜ ಆರೋಪಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು, ಅಮಾಯಕ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು ಎಂಬಿತ್ಯಾದಿಯಾಗಿ ಇಂದು ಎಸ್.ಡಿ. ಪೀ.ಐ ಪಕ್ಷದ ವತಿಯಿಂದ ವಿವಿಧ ನಾಯಕರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಎಸ್.ಪಿ. ಆಪೀಸು ಛಲೋ ಎಂಬ ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಆಯೋಜಿಸಿದ ಪ್ರತಿಭಟನೆಯಲ್ಲಿ, ಪೊಲೀಸರು ಬಿಜೆಪಿ,ಸಂಘ ಪರಿವಾರ ಮತ್ತು ಆರ್.ಎಸ್.ಎಸ್. ನ ತಾಳಕ್ಕೆ ಮತ್ತು ಒತ್ತಡಕ್ಕೆ ಮಣಿದು ಅಮಾಯಕ ಕಾರ್ಯ ಕರ್ತರ ವಿರುದ್ಧ ದೇಶದ್ರೋಹದ ಸುಳ್ಳು ಪ್ರಕರಣ ದಾಖಲಿಸಲಾಗಿದೆ, ಈ ಪ್ರಕರಣ ದಾಖಲಿಸಿದ ಪೊಲೀಸು ಅಧಿಕಾರಿಯಾದ ನಂದಕುಮಾರ್ ರವರನ್ನೂ ತಕ್ಷಣ ಅಮಾನತು ಗೊಳಿಸಬೇಕು ಎಂಬ ಬೇಡಿಕೆ ಘೋಷಣೆ ಮಾಡಲಾಗಿತ್ತು.
ಪೊಲೀಸರು ಬಿಗು ಬಂದೋ ಬಸ್ತ್ ಏರ್ಪಡಿಸಿದ್ದರು,ನಗರಕ್ಕೆ ಆಗಮಿಸುವ ಸಂಚಾರಿ ವಾಹನದ ಮಾರ್ಗಗಳನ್ನು ಬದಲಿಸಲಾಗಿತ್ತು.
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷ ಅತಾವುಲ್ಲಾ ಜೋಕಟ್ಟೆ, ಅಲ್ಪಾನ್ಸೋ ಫ್ರಾಂಕ್, ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ, ಆಶ್ರಫ್ ಮಾಚಾರ್ ಮಾತನಾಡಿದರು. ಕೊನೆಯಲ್ಲಿ ನಿವೇದನ ದೂರು ಮನವಿಯನ್ನು ನಗರ ಪೊಲೀಸ್ ಆಯುಕ್ತರು, ಐ.ಜಿ.ಪೀ.ಯ ಪ್ರಭಾರ ಪ್ರತಿನಿಧಿಯಾಗಿ ಬಂದು ಸ್ವೀಕರಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್