ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಕರ್ನಾಟಕ ವಖ್ಫ್ ಬೋರ್ಡ್ ಸದಸ್ಯರೂ ಆದ ಮೌಲಾನಾ ಶಾಫೀ ಸಅದಿ ಅವರು ವಖ್ಫ್ ಹಣವನ್ನು ದುರುಪಯೋಗ ಮಾಡಿದರು ಎಂಬ ಹೆಸರಿನಲ್ಲಿ ವ್ಯಕ್ತಿಯೊರ್ವರು ಅವರ ಮೇಲೆ ಕೀಳು ಮಟ್ಟದ ಆರೋಪ ಹೊರಿಸಿ ವೈಯುಕ್ತಿಕ ತೇಜೋವಧೆ ಮಾಡಲು ಶ್ರಮಿಸಿದ್ದನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ಖಂಡಿಸಿದೆ.
ವಖ್ಫ್ ಮಂಡಳಿ ಸಮುದಾಯದ ಆಸ್ತಿ, ಸಮುದಾಯದ ಅಭ್ಯುದಯಕ್ಕಾಗಿ ಪೂರ್ವಿಕರಾದ ಸಜ್ಜನರು ತಮ್ಮ ಅಮೂಲ್ಯವಾದ ಭೂಮಿಗಳನ್ನು ವಖ್ಫ್ ಮಾಡಿದ್ದು ಅದರ ಸಂರಕ್ಷಣೆಯ ಜವಾಬ್ದಾರಿಯನ್ನು ವಖ್ಫ್ ಮಂಡಳಿ ಹೊಂದಿದೆ. ಸದ್ರಿ ಮಂಡಳಿಯಲ್ಲಿ ಇಸ್ಲಾಮೀ ಶರೀಅತ್ ಕಾನೂನು ತಿಳಿದ ವಿದ್ವಾಂಸ (ಮೌಲಾನಾ) ರೊಬ್ಬರು ಸದಸ್ಯರಾಗಿ ನೇಮಕಗೊಂಡದ್ದನ್ನು ಸಮುದಾಯ ತುಂಬ ನಿರೀಕ್ಷೆಯೊಂದಿಗೆ ಸ್ವಾಗತಿಸಿದೆ. ಮಂಡಳಿಯ ಸೌಲಭ್ಯಗಳನ್ನು ಸಮುದಾಯದ ಹತ್ತಿರ ಕೊಂಡೊಯ್ಯಲು ಶಾಫೀ ಸಅದಿಯವರು ಶಕ್ತಿ ಮೀರಿ ದುಡಿದಿದ್ದಾರೆ. ಇದೀಗ ಅವರ ಕಾರ್ಯ ವೈಖರಿಯನ್ನು ಗುರುತಿಸಿ ಮಂಡಳಿ ಅವರನ್ನು ಚೇರ್ಮೇನ್ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಮನಗಂಡು ಅದನ್ನು ತಪ್ಪಿಸಲು ಕೆಲವು ವ್ಯಕ್ತಿಗಳು ಮಾಡುವ ಹತಾಶ ಪ್ರಯತ್ನ ಇದೆಂದು, ಇದರಿಂದಾಗಿ ಸಅದಿ ಅವರ ವರ್ಚಸ್ಸಿಗೆ ಯಾವುದೇ ಧಕ್ಕೆಯಾಗದು ಎಂದು ಎಸ್.ವೈ.ಎಸ್.ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ