ಮಂಗಳೂರು: ನೂರು ರುಪಾಯಿ ಮುಖ ಬೆಲೆಯ ಹಳೇಯ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ ಎಂದು ಆರ್ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ ಮಹೇಶ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಗದು ನಿರ್ವಹಣ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನೂರು ರುಪಾಯಿ ಮೌಲ್ಯದ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿ ಇರುವಂತೆ ಮಾಡಲು ಈ ನಿರ್ಧಾರ ತಾಳಲಾಗಿದೆ. ಹಳೆಯ ಮಾದರಿಯ ನೋಟುಗಳಲ್ಲಿ ಖೋಟಾ ನೋಟಿನ ಪ್ರಮಾಣ ಹೆಚ್ಚಾಗಿದ್ದರಿಂದ ಅದನ್ನು ಹಿಂಪಡೆಯಲಾಗುತ್ತಿದೆ. ಮಾರ್ಚ್ ಅಂತ್ಯದ ವೇಳೆ ಎಲ್ಲಾ ಹಳೇಯ ನೋಟುಗಳನ್ನು ಹಿಂಪಡೆಯಲಾಗುತ್ತದೆ ಎಂದು ಹೇಳಿದ್ದಾರೆ.
ಒಂದೇ ವರ್ಷದಲ್ಲಿ ಚಲಾವಣೆಯಲ್ಲಿರುವ ನಗದಿನಲ್ಲಿ ದಾಖಲೆಯ 5 ಲಕ್ಷ ಕೋಟಿ ರೂ. ಏರಿಕೆ
ಕಳೆದ ಆರು ವರ್ಷಗಳಿಂದ ಈ ನೋಟುಗಳನ್ನು ಮುದ್ರಣ ಮಾಡಲಾಗುತ್ತಿಲ್ಲ. ಸದ್ಯ ಈ ಹಿಂದೆಯೇ ಮುದ್ರಣವಾಗಿರುವ ನೋಟುಗಳು ಚಲಾವಣೆಯಲ್ಲಿದ್ದು ಅದನ್ನು ಹಿಂಪಡೆಯುವುದು ಆರ್ಬಿಐನ ಉದ್ದೇಶವಾಗಿದೆ. ಈಗಾಗಲೇ ಹಂತ ಹಂತವಾಗಿ ಈ ನೋಟುಗಳನ್ನು ಹಿಂಪಡೆಯಲಾಗುತ್ತಿದೆ ಎಂದಿದ್ದಾರೆ.
ಇದೇ ವೇಳೆ ಹಳೇಯ ನೋಟು ವಾಪಸ್ ಪಡೆಯುವುದರಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಇಲ್ಲ. ಇದು ನೋಟ್ ಬ್ಯಾನ್ ಅಲ್ಲ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಭಯ ಪಡಬೇಕಾಗಿ ಇಲ್ಲ ಎಂದು ಅವರು ಹೇಳಿದರು. ಅಲ್ಲದೇ ಹೊಸ ಸ್ವಚ್ಛ ನೋಟುಗಳು ಜನರ ಕೈಗೆ ಸಿಗಬೇಕು ಎಂಬುದು ಆರ್ಬಿಐನ ಉದ್ದೇಶ. ಇದು ಯಾವುದೇ ಥರದ ನೋಟು ಅಮಾನ್ಯೀಕರಣ ಅಲ್ಲ ಎಂದು ಹೇಳಿದರು.
ಇದೇ ವೇಳೆ ಹತ್ತು ರುಪಾಯಿ ನಾಣ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಕಲಿ ಎನ್ನುವ ಭೀತಿಯಿಂದ ಜನರು ಹೆಚ್ಚಾಗಿ ಹತ್ತು ರು. ನಾಣ್ಯಗಳನ್ನು ಹೆಚ್ಚಾಗಿ ಬಳಸುತ್ತಿಲ್ಲ. ಈ ನಾಣ್ಯವನ್ನು ನಕಲು ಮಾಡಲು ಸಾದ್ಯವಿಲ್ಲ ಎಂದು ಜನರಿಗೆ ತಿಳಿಸಬೇಕು. ಬ್ಯಾಂಕ್ಗಳು, ಸರ್ಕಾರಿ ಕಚೇರಿಗಳು ಹತ್ತು ರುಪಾಯಿ ನಾಣ್ಯಗಳನ್ನು ಸ್ವೀಕರಿಸಬೇಕು ಎಂದು ಅವರು ಸಲಹೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ