ನವ ದೆಹಲಿ,ಜನವರಿ 26:ಗಣರಾಜ್ಯೋತ್ಸವ ದಿನದ ಪರೇಡ್ ಮುಗಿಯುವ ಮುನ್ನವೇ ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ನಡೆಸಲು ಪ್ರಯತ್ನಿಸಿದ ರೈತ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ, ತಳ್ಳಾಟ ನಡೆದಿದೆ. ಪೊಲೀಸರು ಹಾಕಿದ ಬ್ಯಾರಿಕೇಡ್ಗಳನ್ನ ಬೀಳಿಸಿ ಪ್ರತಿಭಟನಾಕಾರರು ನಗರದೊಳಗೆ ಪ್ರವೇಶ ಮಾಡಲು ಯತ್ನಿಸಿದರು. ಇವರನ್ನು ನಿಯಂತ್ರಿಸಲು ಪೊಲೀಸರು ಆಶ್ರುವಾಯು (Tear Gas) ಮತ್ತು ಲಾಠಿ ಚಾರ್ಜ್ ಪ್ರಯೋಗವನ್ನೂ ಮಾಡಬೇಕಾಯಿತು. ಆದರೂ ಪ್ರತಿಭಟನಾಕಾರರ ಸಹನೆಯ ಕಟ್ಟೆ ಒಡೆದಂತಿತ್ತು. ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಭಾಗ ಅಕ್ಷರಶಃ ಪ್ರಕ್ಷುಬ್ದ ವಾತಾವರಣದಲ್ಲಿದ್ದಂತಿತ್ತು.
ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆಗೆ ಪೊಲೀಸರು ಈ ಮುಂಚೆಯೇ ಅನುಮತಿ ಕೊಟ್ಟಿದ್ದರು. ಆದರೆ, ರಿಪಬ್ಲಿಕ್ ಡೇ ಪರೇಡ್ ಮುಗಿದ ಬಳಿಕ ಮಾತ್ರ ಟ್ರಾಕ್ಟರ್ ಮೆರವಣಿಗೆ ಮಾಡಬೇಕೆಂದು ಷರತ್ತು ಹಾಕಲಾಗಿತ್ತು. ಆದರೆ, ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸೇರಿದ್ದ ರೈತರ ಗುಂಪಲ್ಲಿ ಕೆಲವರು ತಾಳ್ಮೆಗೆಟ್ಟು ಬ್ಯಾರಿಕೇಡ್ ಮುರಿದು ನುಗ್ಗಲು ಯತ್ನಿಸಿದ್ಧಾರೆ. ಹಾಗೆಯೇ, ಟ್ರಾಕ್ಟರ್ ಮೆರವಣಿಗೆಗೆ ದೆಹಲಿಯಲ್ಲಿ ನಿರ್ದಿಷ್ಟ ಮಾರ್ಗಗಳನ್ನ ಪೊಲೀಸರು ನಿಗದಿ ಮಾಡಿ ಅನುಮತಿ ಕೊಟ್ಟಿದ್ದರು. ಆದರೆ, ಪ್ರತಿಭಟನಾಕಾರರು ಬೇರೆ ಬೇರೆ ಮಾರ್ಗಗಳ ಮೂಲಕ ನಗರ ಪ್ರವೇಶ ಮಾಡಲು ಯತ್ನಿಸಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಆದರೆ, ನಿಗದಿತ ಸಮಯಕ್ಕಿಂತ ಮುಂಚೆ ಬ್ಯಾರಿಕೇಟ್ ಮುರಿದು ದೆಹಲಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರು ತಮ್ಮ ಸಂಘಟನೆಗೆ ಸೇರಿದವರಲ್ಲ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿಕೊಂಡಿದೆ. 41 ರೈತ ಸಂಘಟನೆಗಳ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ ತಾನು ಮಧ್ಯಾಹ್ನ 12 ಗಂಟೆಗೆ ನಿಗದಿಯಂತೆ ಟ್ರಾಕ್ಟರ್ ರ್ಯಾಲಿ ಆಯೋಜಿಸುವುದಾಗಿ ಹೇಳಿದೆ. ಆದರೆ, ಇವತ್ತು ಬೆಳಗ್ಗೆ ಹಿಂಸಾಚಾರಕ್ಕಿಳಿದ ಪ್ರತಿಭಟನಾಕಾರರು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಗೆ ಸೇರಿದವರು ಎಂದು ಹೇಳಿದೆ.
ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ಬಂದ ರೈತರಿಗೆ ಸ್ವರೂಪ್ ನಗರ್ ಬಳಿಕ ಜನರು ಪುಷ್ಪಾರ್ಚಣೆ ಮಾಡಿ ಹುರಿದುಂಬಿಸಿದ ಘಟನೆಯೂ ನಡೆದಿದೆ. ಇದೇ ವೇಳೆ, ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪೊಲೀಸರು ವಿವಿಧೆಡೆ ನಿರ್ಮಿಸಿದ ತಡೆಗೋಡೆಗಳು ಪ್ರತಿಭಟನಾಕಾರರ ಕಿಚ್ಚಿಗೆ ಕೆಳಗುರುಳಿವೆ. ಒಂದು ಕಡೆಯಂತೂ ಇಡೀ ರಸ್ತೆಗೆ ತಡೆಗೋಡೆಯಾಗಿ ನಿಲ್ಲಿಸಲಾಗಿದ್ದ ಬಸ್ಸನ್ನೂ ಉಜ್ಜಿಕೊಂಡೇ ಟ್ರಾಕ್ಟರ್ಗಳು ಸಾಗಿವೆ. ಎಂಥದ್ದೇ ಪರಿಸ್ಥಿತಿ ಬಂದರೂ ದೆಹಲಿಗೆ ನುಗ್ಗಿ ತಮ್ಮ ಆಕ್ರೋಶ ಹೊರಹಾಕಲು ರೈತರು ನಿರ್ಧರಿಸಿದಂತಿದೆ.
ಈ ಘಟನೆ ಇದೀಗ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಅಲ್ಲದೆ, ಪೊಲೀಸ್ ಲಾಠಿ ಚಾರ್ಚ್ ವೇಳೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 20 ಜನರ ಸ್ಥಿತಿ ಗಂಭೀರವಾಗಿದ ಎನ್ನಲಾಗುತ್ತಿದೆ. ಹೀಗಾಗಿ ರೈತ ಹೋರಾಟದಲ್ಲಿನ ಹಿಂಸಾಚಾರದ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, “ಹಿಂಸೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಯಾರಿಗಾದರೂ ತೊಂದರೆಯಾದರೆ, ನಮ್ಮ ದೇಶಕ್ಕೆ ಹಾನಿ ಸಂಭವಿಸುತ್ತದೆ. ದೇಶದ ಹಿತಕ್ಕಾಗಿ ಕೃಷಿ ವಿರೋಧಿ ಕಾನೂನನ್ನು ಕೇಂದ್ರ ಸರ್ಕಾರ ಹಿಂದಕ್ಕೆ ತೆಗೆದುಕೊಳ್ಳಬೇಕು!” ಎಂದು ಒತ್ತಾಯಿಸಿದ್ದಾರೆ.
ಭಾರತದ ಧ್ವಜವನ್ನು ಕಿತ್ತು ರೈತ ಧ್ವಜ ಹಾರಿಸಿದರೇ?
ಮಾಹಿತಿಗಳ ಪ್ರಕಾರ ರೈತ ಹೋರಾಟಗಾರರು ಕೆಂಪು ಕೋಟೆಯ ಆವರಣದಲ್ಲಿ ರೈತ ಮತ್ತು ಸಿಖ್ ಧ್ವಜವನ್ನು ಹಾರಿಸಿದ್ದಾರೆ. ಆದರೆ, ಕೆಲವು ಮಾಧ್ಯಮಗಳು ಕೆಂಪುಕೋಟೆಯಲ್ಲಿ ಭಾರತೀಯ ಧ್ವಜವನ್ನು ಕೆಳಗಿಳಿಸಿ ಸಿಖ್ ಧ್ವಜವನ್ನು ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು, ರೈತ ಹೋರಾಟವನ್ನು ದಿಕ್ಕು ತಪ್ಪಿಸುವ ಯತ್ನ ನಡೆಸಲಾಗಿದೆ.
ದೆಹಲಿಯ ರೈತ ಹೋರಾಟ ಇದೀಗ ಉಗ್ರರೂಪ ತಳೆದಿದ್ದು, ಮುಂದಿನ ದಿನಗಳಲ್ಲಿ ಈ ಹೋರಾಟ ಯಾವ ಸ್ವರೂಪ ಪಡೆಯಲಿದೆ? ಕೇಂದ್ರ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ? ಎಂಬುದನ್ನು ಕಾದು ನೋಡಬೇಕಿದೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ