ಸೌದಿ ಅರೇಬಿಯಾ: ಜುಬೈಲ್ ನ ಪ್ರತಿಷ್ಠಿತ ಕಂಪನಿ ಯುನೈಟೆಡ್’ಟೆಕ್ ನಲ್ಲಿ ಉತ್ತಮ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಂಗಳೂರು ಬೆಂಜನಪದವು ನಿವಾಸಿ ಇಸ್ಮಾಯಿಲ್ ಅಬ್ದುಲ್ ಹಮೀದ್ (ಹನೀಫ್) ಎಂಬುವವರು ಜನವರಿ 30 ರಂದು ಅನಾರೋಗ್ಯದಿಂದ ಮರಣಹೊಂದಿರುತ್ತಾರೆ. ಉತ್ತಮ ಗುಣ ನಡತೆಯ ವ್ಯಕ್ತಿತ್ವ ಹೊಂದಿದ್ದ ಇವರು ಸಾಂತ್ವನ ಹಾಗೂ ಹಲವಾರು ಸಂಘಸಂಸ್ಥೆ ಸ್ಥಾಪನೆಗಳಿಗೆ ಸಹಾಯಸ್ತ ನೀಡುತ್ತಿದ್ದ ಕೊಡುಗೈ ದಾನಿಯಾಗಿದ್ದರು. ಮೃತರು ತಾಯಿ, ಹೆಂಡತಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮರಣೋತ್ತರ ಕ್ರಿಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕೂಡಲೆ ಸ್ಪಂದಿಸಿ ಕಾರ್ಯ ಪ್ರವರ್ತರಾದ ಕೆ.ಸಿ.ಎಫ್ ಜುಬೈಲ್ ಹಾಗು ದಮ್ಮಾಮ್ ಝೋನ್ ಸಾಂತ್ವನ ತಂಡವು ಭಾರತೀಯ ರಾಯಬಾರಿ ಕಛೇರಿ ಹಾಗೂ ಊರಿನಿಂದ ಬೇಕಾದ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಕೇವಲ 1 ದಿವಸದೊಳಗಾಗಿ ಜನವರಿ 31ರಂದು ಮಗ್ರಿಬ್ ನಮಾಜಿನ ಬಳಿಕ ಜುಬೈಲ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಈ ಒಂದು ಉತ್ತಮ ಕಾರ್ಯದಲ್ಲಿ ಕೆ.ಸಿ.ಎಫ್ ನೊಂದಿಗೆ ಸಹಕರಿಸಿದ ಝೋನ್ ಸಾಂತ್ವನ ಕನ್ವೀನರ್ ಬಾಷಾ ಗಂಗಾವಳಿ, ಜುಬೈಲ್ ಸಾಂತ್ವನ ನಾಯಕರಾದ ನೌಫಲ್ ಮುಲ್ಕಿ, ಸಫ್ವಾನ್ ಮುಕ್ಕ, ಮತ್ತು ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ (ಇಬ್ಬ) ಬಜ್ಪೆ ಹಾಗೂ ಯುನೈಡೆಟ್ ಅಬ್ದುರ್ರಹ್ಮಾನ್ ಬಜ್ಪೆ ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ.
ಕೆ.ಸಿ.ಎಫ್ ಜುಬೈಲ್ ಶೋಲ ಸೆಕ್ಟರ್ ಅಧ್ಯಕ್ಷರಾದ ಅಬೂಬಕರ್ ಮದನಿ ಹಾಗೂ ಹಲವು ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮೃತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ