ಸಲ್ಮಾನಿಯ, ಬಹರೈನ್: ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ವತಿಯಿಂದ ಕೆಸಿಎಫ್ ದಿನಾಚರಣೆ ಪ್ರಯುಕ್ತ ಸ್ವಯಂ ಪ್ರೇರಿತವಾಗಿ ನಡೆದ ಬೃಹತ್ ರಕ್ತದಾನ ಶಿಬಿರವು ಸಲ್ಮಾನಿಯ ಮೆಡಿಕಲ್ ಸೆಂಟರ್ ನಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು.
ಫೆಬ್ರವರಿ 5 ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಅಬ್ದುಲ್ ಖಾದರ್ ಉಸ್ತಾದ್ ರವರ ದುಃಆ ಮೂಲಕ ಆರಂಭಗೊಂಡ ಶಿಬಿರದಲ್ಲಿ ಕೆಸಿಎಫ್ ನ ಸದಸ್ಯರು ಮತ್ತು ಇಲ್ಲಿನ ಸ್ವದೇಶಿಗಳು ವಿದೇಶಿಯರು ಸೇರಿ ನೂರರಷ್ಟು ಮಿಕ್ಕ ರಕ್ತದಾನಿಗಳು ಭಾಗವಹಿಸಿದ್ದರು.

ಕೆಸಿಎಫ್ ಬಹರೈನ್ ನ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಟಲ್ , ಕಾರ್ಯದರ್ಶಿ ಹಾರಿಸ್ ಸಂಪ್ಯ , ಕೋಶಾಧಿಕಾರಿ ಸೂಫಿ ಪೈಂಬಚ್ಚಾಲ್ ಹಾಗೂ ಸಂಘಟನೆಗಳು ನೇತಾರರೂ ಸದಸ್ಯರುಗಳು ರಕ್ತದಾನ ಮಾಡಿ ಮಾದರಿಯಾದರು.
ಕೆಸಿಎಫ್ ಬಹರೈನ್ ಸೌತ್ ಝೋನ್ ಇದರ ಸಂಘಟನಾ ವಿಭಾಗದ ಅಧ್ಯಕ್ಷರಾದ ಶಾಫಿ ಕಂಬಲಬೆಟ್ಟುರವರ ನೇತೃತ್ವದಲ್ಲಿ ನಡೆದ ಶಿಬಿರವು ಕೋವಿಡ್ ನ ಎಲ್ಲಾ ಮಾನದಂಡಗಳನ್ನು ಪಾಲಿಸಿ ಬಹಳ ಅಚ್ಚುಕಟ್ಟಾಗಿ ಶಿಸ್ತಿನಿಂದ ನಡೆಸಿದ ಕಾರ್ಯವೈಖರಿಯನ್ನು ಕಂಡು ಸಲ್ಮಾನಿಯ ಮೆಡಿಕಲ್ ಸೆಂಟರ್ ನ ಅಧಿಕಾರಿಗಳು ಸಂಘಟಕರನ್ನು ಪ್ರಶಂಶಿಸಿದರು.

ಶಿಬಿರದ ಉಸ್ತುವಾರಿಯನ್ನು ಕೆಸಿಎಫ್ ಬಹರೈನ್ ಇದರ ಸಾಂತ್ವನ ವಿಭಾಗದ ನೇತಾರರಾದ ಕರೀಮ್ ಮಾಝಾ ,ಹನೀಫ್ ಜಿಕೆ ರವರು ವಹಿಸಿದ್ದರು.
ಶಿಬಿರಾರ್ಥಿಗಳಿಗೆ ಬರಲು ವಾಹನ ಸೌಕರ್ಯಗಳನ್ನು ಒದಗಿಸಲಾಯಿತು ಹಾಗೂ ಬೆಳಗ್ಗಿನ ಲಘು ಫಲಹಾರ ಜೊತೆಗೆ ಹಣ್ಣು ಹಂಪಲು ವಿತರಿಸಲಾಯಿತು. ಪ್ರತೀ ರಕ್ತಧಾನಿಗಳಿಗೆ ಕೆಸಿಎಫ್ ಬಹರೈನ್ ವತಿಯಿಂದ ಮೆಚ್ಚುಗೆ ಪ್ರಮಾಣ ಪತ್ರ ಗಳನ್ನು ನೀಡಲಾಯಿತು.
ಶಿಬಿರದಲ್ಲಿ ಕೆಸಿಎಫ್ ಬಹರೈನ್ ನ ರಾಷ್ಟ್ರೀಯ,ಝೋನ್ ಮತ್ತು ಸೆಕ್ಟರ್ ಗಳ ನೇತಾರರೂ ಹಾಗೂ ಬಹರೈನ್ ನ ವಿವಿಧ ಸಂಘಟನೆಗಳ ನೇತಾರರೂ ಭಾಗವಹಿಸಿದ್ದರು
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ