ನವದೆಹಲಿ: ದೇಶಿ ವಿಮಾನ ಪ್ರಯಾಣಿಕರಿಗೆ ಗುಡ್ನ್ಯೂಸ್ ಸಿಕ್ಕಿದೆ. ಹೌದು, ದೇಶಿಯ ವಿಮಾನದಲ್ಲಿ ಚೆಕ್ಇನ್ ಬ್ಯಾಗೇಜ್ ಇಲ್ಲದೇ ಪ್ರಯಾಣಿಸುವ ಪ್ರಯಾಣಿಕರ ದರದಲ್ಲಿ ರಿಯಾಯಿತಿ ನೀಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರದಂದು ಅನುಮತಿ ನೀಡಿದೆ ಎಂದು ಎಎನ್ಐ ವರದಿ ಮಾಡಿದೆ.
ಕೊರೋನಾ ಸೋಂಕಿನಿಂದಾಗಿ ವಿಮಾನಯಾನ ಸ್ಥಗಿತಗೊಳಿಸಿದ ಬಳಿಕ ಪ್ರಯಾಣಿಕರನ್ನು ಆಕರ್ಷಿಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯ ಮುಂದಾಗಿದೆ. ಕೊರೋನಾ ಸೋಂಕಿನ ನಡುವೆ ಮುಂಜಾಗ್ರತಾ ಕ್ರಮಗಳೊಂದಿಗೆ ಮೊದಲಿಗೆ ಶೇ.45ರಷ್ಟು ಪ್ರಯಾಣಿಕರೊಂದಿಗೆ ಹಾರಾಟ ನಡೆಸುತ್ತಿದ್ದ ವಿಮಾನಗಳು ಇದೀಗ ಶೇ.80ರಷ್ಟು ಪ್ರಯಾಣಿಕರೊಂದಿಗೆ ವಿಮಾನ ಹಾರಾಟ ನಡೆಸುತ್ತಿವೆ.
7 ಕೆ.ಜಿ ತೂಕದವರೆಗೂ ಕ್ಯಾಬಿನ್ ಬ್ಯಾಗೇಜ್ ಉಚಿತ:
ಎಎನ್ಐ ವರದಿ ಪ್ರಕಾರ, ದೇಶಿಯ ಪ್ರಯಾಣಿಕರು 7 ಕೆ.ಜಿ ತೂಕದವರೆಗೂ ಕ್ಯಾಬಿನ್ ಬ್ಯಾಗೇಜ್ ಅನ್ನು ಉಚಿತವಾಗಿ ಕೊಂಡೊಯ್ಯಲು ಅವಕಾಶವಿದೆ. ಅಷ್ಟೇ ಅಲ್ಲದೇ ಚೆಕ್-ಇನ್ ಬ್ಯಾಗೇಜ್ ಇಲ್ಲದೇ ಪ್ರಯಾಣಿಸುವವರು ಪ್ರಯಾಣಿಕರಿಗೆ ದೇಶಿಯ ವಿಮಾನ ಪ್ರಯಾಣ ದರದಲ್ಲಿ ರಿಯಾಯಿತಿ ನೀಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ ಅವಕಾಶ ಮಾಡಿಕೊಟ್ಟಿದೆ. ಆದರೆ, ಪ್ರಯಾಣಿಕರು ಪ್ರಯಾಣದ ವೇಳೆ ಟಿಕೆಟ್ ಬುಕ್ಕಿಂಗ್ ಸಮಯದಲ್ಲಿ ತಮ್ಮ ಲಗೇಜ್ನ ಕುರಿತಾದ ಮಾಹಿತಿಯನ್ನು ನೀಡಬೇಕಾಗುತ್ತದೆ.
ಚೆಕ್ ಇನ್ ಬ್ಯಾಗೇಜ್ನಲ್ಲಿ 15 ಕೆಜಿಗೆ ಅವಕಾಶ
ಇನ್ನು, ಏರ್ಲೈನ್ಸ್ ನಿಯಮ ಪ್ರಕಾರ ದೇಶಿಯ ವಿಮಾನ ಪ್ರಯಾಣಿಕರಿಗೆ 15 ಕೆಜಿ ವರೆಗೆ ಚೆಕ್ ಇನ್ ಬ್ಯಾಗೇಜ್ನಲ್ಲಿ ಕೊಂಡೊಯ್ಯಲು ಅವಕಾಶವಿದೆ. ಇದಕ್ಕಿಂತ ಹೆಚ್ಚಿನ ಲಗೇಜ್ ಅನ್ನು ಪ್ರಯಾಣಿಕ ಹೊಂದಿದ್ದರೆ ಟಿಕೆಟ್ ಬುಕ್ಕಿಂಗ್ ವೇಳೆಯೇ ಪ್ರಯಾಣಿಕರಿಗೆ ಅವರ ಬ್ಯಾಗೇಜ್ ಮೇಲೆ ಶುಲ್ಕವನ್ನು ವಿಧಿಸಲಾಗುತ್ತದೆ. ಇದು, ಪ್ರಯಾಣಿಕರ ಟಿಕೆಟ್ನಲ್ಲಿ ಕೂಡ ಪ್ರಿಂಟ್ ಆಗಿರುತ್ತದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ರಾಜ್ಯಸಭೆಯಲ್ಲಿ ಮಾತನಾಡಿರುವ ಪ್ರಕಾರ, ದೇಶಿಯ ವಿಮಾನ ಪ್ರಯಾಣ ದರಗಳು ಒಂದೇ ರೀತಿಯಾಗಿ ಇರುವುದಿಲ್ಲ.ವಿಮಾನಯಾನ ಸಂಸ್ಥೆಗಳಿಗೆ ಕೊರೊನಾ ಸೋಂಕಿನ ಹಿನ್ನೆಲೆ ಮಾರ್ಚ್ 31ರ ವರೆಗೆ ಶೇ.80ರಷ್ಟು ಪ್ರಯಾಣಿಕರೊಂದಿಗೆ ಮಾತ್ರ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ