ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಹಾಗೂ ಬದ್ರ್ ಅಲ್ ಸಮಾ ಆಸ್ಪತ್ರೆ ಬರ್ಕ ಇದರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮಾಹಿತಿ ಶಿಬಿರ ವು ಕೆಸಿಎಫ್ ಒಮಾನ್ ರಾಷ್ಟ್ರೀಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ Zoom Online ಮುಖಾಂತರ ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ ಇವರು ನೆರವೇರಿಸಿದರು.
ಆರೋಗ್ಯ ಮಾಹಿತಿ ಶಿಬಿರವನ್ನು ಬದ್ರ್ ಅಲ್ ಸಮಾ ಆಸ್ಪತ್ರೆಯ ಮುಖ್ಯ ಆರೋಗ್ಯ ತಜ್ಞರು ಡಾ. ಎ .ವಿ.ರವೀಂದ್ರನ್ ಇವರು ನಿತ್ಯ ಜೀವನ ಶೈಲಿಯಲ್ಲಿ ಪಾಲಿಸಬೇಕಾದ ಅತ್ಯಮೂಲ್ಯ ವಾದ ಮಾಹಿತಿ ಹಾಗೂ ತನ್ನ ಆರೋಗ್ಯ ಕಾಪಾಡಲು ಸಾಧ್ಯವಾಗುವ ಉಪಯುಕ್ತವಾದ ಸಲಹೆಗಳನ್ನು ಹಂಚಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಐನ್ಸಿ ಆಡಳಿತ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ ,ಕೆಸಿಎಫ್ ಒಮಾನ್ ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, ರಾಷ್ಟ್ರೀಯ ನಾಯಕರು ಹಾಗೂ ಝೋನ್ ನಾಯಕರು ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ ಸ್ವಾಗತಿಸಿ , ಸಂಘಟನಾಧ್ಯಕ್ಷ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ಕೊಡಗು ವಂದಿಸಿ ಕಲಂದರ್ ಬಾವ ಪರಪ್ಪು ಕಾರ್ಯಕ್ರಮ ನಿರೂಪಿಸಿದರು.














ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ