ಬೆಂಗಳೂರು,ಮಾ.3:ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ರಾಸಲೀಲೆ ಹಗರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ತರಲು ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಸಾರ್ವತ್ರಿಕವಾಗಿ ಕೇಳಿ ಬಂದ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ.
ತಮ್ಮ ಸಹೋದರ ಬಾಲಚಂದ್ರ ಜಾರಕಿಹೊಳಿ ರಾಜೀನಾಮೆ ಪತ್ರ ರವಾನಿಸಿದ್ದು, ತಕ್ಷಣವೇ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಅಂಗೀಕಾರ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದಾರೆ.
ಮಂಗಳವಾರ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಪೋಲೀಸ್ ಆಯುಕ್ತರಿಗೆ ದೂರು ನೀಡಿದ ಸ್ವಲ್ಪ ಹೊತ್ತಿನಲ್ಲೇ ರಾಸಲೀಲೆಯ ವಿಡಿಯೋ ದೆಹಲಿಯಲ್ಲಿದ್ದ ಪಕ್ಷದ ವರಿಷ್ಟರಿಗೆ ತಲುಪಿತು. ವರಿಷ್ಠರ ಸೂಚನೆ ಮೇರೆಗೆ ರಮೇಶ್ ಜಾರಕಿಹೊಳಿ ತಮ್ಮ ಹುದ್ದೆ ತ್ಯಜಿಸಿದ್ದಾರೆ.
ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಮುಜುಗರದಿಂದ ತಪ್ಪಿಸಿಕೊಳ್ಳಲು ರಮೇಶ್ ಜಾರಕಿಹೊಳಿ ಈ ತೀರ್ಮಾನ ಕೈಗೊಂಡಿದ್ದಾರೆ.
ರಾಜೀನಾಮೆ ಪತ್ರ ನೀಡಲು ಆಗಮಿಸಿದ್ದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಮಾಧಾನ ಹೇಳಿದ್ದಾರೆ. ತನಿಖೆ ನಡೆದ ನಂತರ ರಮೇಶ್ ಜಾರಕಿಹೊಳಿ ತಪ್ಪಿತಸ್ಥರಲ್ಲ ಎಂಬುದು ಸಾಬೀತಾದರೆ ಮರಳಿ ಸಚಿವ ಸಂಪುಟಕ್ಕೆ ಸೇರಲಿ.ಅವರು ನಿರ್ದೋಷಿ ಎಂಬುದು ಸಾಬೀತಾದರೆ ಒಂದು ದಿನವೂ ತಡಮಾಡದೆ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಸುದ್ದಿಗಾರರ ಜತೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ:ಇದು ವಿರೋಧಿಗಳ ಪಿತೂರಿ,ರಮೇಶ್ ಜಾರಕಿಹೊಳಿ ಯಾವ ತಪ್ಪೂ ಮಾಡಿಲ್ಲ.ಹೀಗಾಗಿ ರಾಜೀನಾಮೆಯ ಅಗತ್ಯವಿಲ್ಲ ಎಂದು ಹೇಳಿದರು.
ಈ ಮಧ್ಯೆ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ರಾಜಕೀಯ ವಲಯಗಳಲ್ಲಿ ಭಾರೀ ಕೋಲಾಹಲವೆಬ್ಬಿಸಿದ್ದು ಪ್ರತಿಪಕ್ಷ ಕಾಂಗ್ರೆಸ್,ಜೆಡಿಎಸ್ ನಾಯಕರು ಬಿಜೆಪಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.
ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು,ಮಾನ ಮರ್ಯಾದೆ ಇದ್ದವರು ಈ ರೀತಿ ಮಾಡಲು ಸಾಧ್ಯವಿಲ್ಲ ಎಂದಿದ್ದರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ: ನನ್ನ ಸರ್ಕಾರವನ್ನು ತೆಗೆದು ರಾಮರಾಜ್ಯವನ್ನು ಸ್ಥಾಪಿಸುತ್ತೇವೆ ಎಂದವರು ಕೊಟ್ಟ ರಾಮರಾಜ್ಯ ಇದೇನೇ?ಎಂದು ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಹಿರಿಯ ನಾಯಕರಾದ ಹೆಚ್.ವಿಶ್ವನಾಥ್ ಅವರು ಮಾತನಾಡಬೇಕು.ರಾಮರಾಜ್ಯ ತರುತ್ತೇವೆ ಎಂದು ತಾನೇ ಇವರೆಲ್ಲ ಹೊರಟಿದ್ದು?ನೀವು ಬಯಸಿದ ರಾಮರಾಜ್ಯ ಇದೇನಾ?ಅಂತ ಹೇಳಬೇಕು ಎಂದು ವ್ಯಂಗ್ಯವಾಡಿದರು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ