ಲಖನೌ: ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ತನ್ನ ವಿರೋಧದ ನಡುವೆಯೂ ಪ್ರೀತಿಯಲ್ಲಿ ಬಿದ್ದಿದ್ದ ಮಗಳ ತಲೆಯನ್ನೇ ಕತ್ತರಿಸಿದ ತಂದೆಯೋರ್ವ ಆ ತಲೆಯನ್ನು ಪೊಲೀಸ್ ಠಾಣೆಗೆ ತಂದು ಪೊಲೀಸರಿಗೆ ಶರಣಾಗಿದ್ದಾನೆ.
ಹೌದು.. ಉತ್ತರ ಪ್ರದೇಶದ ಹರ್ದೋಯಿಯ ಪಂಡೆೇತಾರ ಗ್ರಾಮದಲ್ಲಿ ಈ ನಡೆದಿದ್ದು, 17 ವರ್ಷದ ಮಗಳು ಸೋದರ ಸಂಬಂಧಿ ಆದೇಶ್ ಎಂಬ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ಇದಕ್ಕೆ ಆಕೆಯ ಪೋಷಕರು ತೀವ್ರವಿರೋಧ ವ್ಯಕ್ತಪಡಿಸಿದ್ದರು. ಅದಾಗ್ಯೂ ಯುವತಿ ತನ್ನ ಪ್ರೇಮ ಸಲ್ಲಾಪ ಮುಂದುವರೆಸಿದ್ದಳು ಎನ್ನಲಾಗಿದೆ. ಇದರಿಂದ ವ್ಯಾಘ್ರಗೊಂಡ ತಂದೆ ಮಗಳು ಮತ್ತು ಆತನ ಪ್ರಿಯಕರ ಇಬ್ಬರನ್ನೂ ಕೊಲೆ ಮಾಡಲು ಯೋಜನೆ ರೂಪಿಸಿದ್ದ.
ಮಗಳು ಮನೆಯಲ್ಲಿ ಒಬ್ಬಂಟಿಯಾಗಿರುವ ಮಾಹಿತಿ ಗೊತ್ತಾಗುತ್ತಿದ್ದಂತೆ ಬಾಗಿಲು ಮುಚ್ಚಿ ಆಕೆಯ ತಲೆ ಕತ್ತರಿಸಿದ್ದಾನೆ. ಬಳಿಕ ಕೈಯಲ್ಲಿ ಆಕೆಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬರಲು ಮುಂದಾಗಿದ್ದಾನೆ. ಘಟನೆಯಿಂದ ಭಯಭೀತರಾದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗಳ ಕತ್ತರಿಸಿದ ತಲೆ ಹಿಡಿದು ಬರುತ್ತಿದ್ದ ಆತನನ್ನು ಬಂಧಿಸಿದ್ದಾರೆ.
ಇಬ್ಬರು ಪೊಲೀಸ್ ಅಧಿಕಾರಿಗಳು ಆಗಮಿಸಿ ಆತನ ಸಮೀಪದಿಂದ ತಮ್ಮ ಫೋನ್ನಲ್ಲಿ ವೀಡಿಯೊ ಮಾಡಿಕೊಂಡರು. ಆತನ ಹೆಸರು ಕೇಳಿ ಯಾರ ತಲೆ ಎಂದು ಪ್ರಶ್ನಿಸಿದರು. ಸರ್ವೇಶ್ ಯಾವುದೇ ಅಂಜಿಕೆ ಇಲ್ಲದೇ ಉತ್ತರಿಸುವ ದೃಶ್ಯ ಸೆರೆಯಾಗಿದೆ. ವ್ಯಕ್ತಿಯೊಬ್ಬನ ಜತೆ ಪುತ್ರಿ ಸಂಬಂಧ ಬೆಳೆಸಿದ್ದರಿಂದ ಕೋಪಗೊಂಡು ಹರಿತವಾದ ಆಯುಧದಿಂದ ತಲೆ ಕತ್ತರಿಸಿದ್ದಾಗಿ ಸರ್ವೇಶ್ ಹೇಳಿದ್ದಾನೆ.
ಈ ವೇಳೆ ಈ ಕೊಲೆಯನ್ನು ನಾನೇ ಮಾಡಿದ್ದು ಎಂದು ಸರ್ವೇಶ್ ಹೇಳಿದ್ದಾನೆ. ‘ಬೇರೆ ಯಾರೂ ಇರಲಿಲ್ಲ. ನಾನೇ ಅದನ್ನು ಮಾಡಿದ್ದು. ಬಾಗಿಲು ಚಿಲಕ ಹಾಕಿ ತಲೆ ಕತ್ತರಿಸಿದೆ. ಮೃತದೇಹ ಕೊಠಡಿಯಲಿದೆ” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಇನ್ನು ಪ್ರಸ್ತುತ ಆತನನ್ನು ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು ಬಳಿಕ ಬಂಧಿಸಿದರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅನುರಾಗ್ ವತ್ಸ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ