ಲಖನೌ: ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ತನ್ನ ವಿರೋಧದ ನಡುವೆಯೂ ಪ್ರೀತಿಯಲ್ಲಿ ಬಿದ್ದಿದ್ದ ಮಗಳ ತಲೆಯನ್ನೇ ಕತ್ತರಿಸಿದ ತಂದೆಯೋರ್ವ ಆ ತಲೆಯನ್ನು ಪೊಲೀಸ್ ಠಾಣೆಗೆ ತಂದು ಪೊಲೀಸರಿಗೆ ಶರಣಾಗಿದ್ದಾನೆ.
ಹೌದು.. ಉತ್ತರ ಪ್ರದೇಶದ ಹರ್ದೋಯಿಯ ಪಂಡೆೇತಾರ ಗ್ರಾಮದಲ್ಲಿ ಈ ನಡೆದಿದ್ದು, 17 ವರ್ಷದ ಮಗಳು ಸೋದರ ಸಂಬಂಧಿ ಆದೇಶ್ ಎಂಬ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ಇದಕ್ಕೆ ಆಕೆಯ ಪೋಷಕರು ತೀವ್ರವಿರೋಧ ವ್ಯಕ್ತಪಡಿಸಿದ್ದರು. ಅದಾಗ್ಯೂ ಯುವತಿ ತನ್ನ ಪ್ರೇಮ ಸಲ್ಲಾಪ ಮುಂದುವರೆಸಿದ್ದಳು ಎನ್ನಲಾಗಿದೆ. ಇದರಿಂದ ವ್ಯಾಘ್ರಗೊಂಡ ತಂದೆ ಮಗಳು ಮತ್ತು ಆತನ ಪ್ರಿಯಕರ ಇಬ್ಬರನ್ನೂ ಕೊಲೆ ಮಾಡಲು ಯೋಜನೆ ರೂಪಿಸಿದ್ದ.
ಮಗಳು ಮನೆಯಲ್ಲಿ ಒಬ್ಬಂಟಿಯಾಗಿರುವ ಮಾಹಿತಿ ಗೊತ್ತಾಗುತ್ತಿದ್ದಂತೆ ಬಾಗಿಲು ಮುಚ್ಚಿ ಆಕೆಯ ತಲೆ ಕತ್ತರಿಸಿದ್ದಾನೆ. ಬಳಿಕ ಕೈಯಲ್ಲಿ ಆಕೆಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬರಲು ಮುಂದಾಗಿದ್ದಾನೆ. ಘಟನೆಯಿಂದ ಭಯಭೀತರಾದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗಳ ಕತ್ತರಿಸಿದ ತಲೆ ಹಿಡಿದು ಬರುತ್ತಿದ್ದ ಆತನನ್ನು ಬಂಧಿಸಿದ್ದಾರೆ.
ಇಬ್ಬರು ಪೊಲೀಸ್ ಅಧಿಕಾರಿಗಳು ಆಗಮಿಸಿ ಆತನ ಸಮೀಪದಿಂದ ತಮ್ಮ ಫೋನ್ನಲ್ಲಿ ವೀಡಿಯೊ ಮಾಡಿಕೊಂಡರು. ಆತನ ಹೆಸರು ಕೇಳಿ ಯಾರ ತಲೆ ಎಂದು ಪ್ರಶ್ನಿಸಿದರು. ಸರ್ವೇಶ್ ಯಾವುದೇ ಅಂಜಿಕೆ ಇಲ್ಲದೇ ಉತ್ತರಿಸುವ ದೃಶ್ಯ ಸೆರೆಯಾಗಿದೆ. ವ್ಯಕ್ತಿಯೊಬ್ಬನ ಜತೆ ಪುತ್ರಿ ಸಂಬಂಧ ಬೆಳೆಸಿದ್ದರಿಂದ ಕೋಪಗೊಂಡು ಹರಿತವಾದ ಆಯುಧದಿಂದ ತಲೆ ಕತ್ತರಿಸಿದ್ದಾಗಿ ಸರ್ವೇಶ್ ಹೇಳಿದ್ದಾನೆ.
ಈ ವೇಳೆ ಈ ಕೊಲೆಯನ್ನು ನಾನೇ ಮಾಡಿದ್ದು ಎಂದು ಸರ್ವೇಶ್ ಹೇಳಿದ್ದಾನೆ. ‘ಬೇರೆ ಯಾರೂ ಇರಲಿಲ್ಲ. ನಾನೇ ಅದನ್ನು ಮಾಡಿದ್ದು. ಬಾಗಿಲು ಚಿಲಕ ಹಾಕಿ ತಲೆ ಕತ್ತರಿಸಿದೆ. ಮೃತದೇಹ ಕೊಠಡಿಯಲಿದೆ” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಇನ್ನು ಪ್ರಸ್ತುತ ಆತನನ್ನು ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು ಬಳಿಕ ಬಂಧಿಸಿದರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅನುರಾಗ್ ವತ್ಸ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್