ಹೊಸ ದಿಲ್ಲಿ: ಲೋಕಸಭಾ ಹಾಗೂ ರಾಜ್ಯಸಭಾ ಕಲಾಪಗಳೆರಡಕ್ಕೂ ತೈಲ ದರ ಏರಿಕೆಯ ಬಿಸಿ ತಟ್ಟಿದೆ. ಮಂಗಳವಾರ ಉಭಯ ಸದನಗಳು ಹಲವು ಬಾರಿ ಮುಂದೂಡಿಕೆಯಾಗಿವೆ. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಭಾರೀ ಗದ್ದಲ, ಕೋಲಾಹಲ ಎಬ್ಬಿಸಿದ್ದು, ಸದಸ್ಯರು ಶಾಂತಿ ಕಾಪಾಡಬೇಕೆಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿವೆ.
ಲೋಕಸಭೆ ಕಲಾಪ ಮಂಗಳವಾರ ಆರಂಭವಾದ ಕೂಡಲೇ ಮುಂದೂಡಬೇಕಾಯ್ತು. ವಿಪಕ್ಷ ಸದಸ್ಯರು ಪ್ರಶ್ನೋತ್ತರ ಕಲಾಪಕ್ಕೂ ಅಡ್ಡಿಪಡಿಸಿದರು. ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಇಂಧನ ದರ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿದರು.
ಡಿಎಂಕೆ ಹಾಗೂ ತೃಣಮೂಲ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಲ್ಲೇ ಎದ್ದು ನಿಂತು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಲೋಕಸಭಾ ಟಿವಿಯು ವಿಪಕ್ಷಗಳ ಮಾತನ್ನು ಪ್ರಸಾರ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಓಂ ಬಿರ್ಲಾ, ನೀವು ಘೋಷಣೆ ಕೂಗೋದನ್ನು ಹಾಗೂ ಸದನಕ್ಕೆ ಅಡ್ಡಿ ಪಡಿಸೋದನ್ನು ಟಿವಿಯಲ್ಲಿ ತೋರಿಸಬೇಕಾ? ದೇಶದ ಜನರು ಈ ದೃಶ್ಯಗಳನ್ನು ನೋಡಬೇಕಾ ಎಂದು ಸವಾಲೆಸೆದರು. ಈ ಪ್ರಶ್ನೆಗೆ ಉತ್ತರಿಸಿದ ಚೌಧರಿ, ಪ್ರತಿಭಟನೆಗಳೂ ಕೂಡಾ ಸಂಸದೀಯ ವ್ಯವಸ್ಥೆಯ ಒಂದು ಭಾಗ ಎಂದು ಹೇಳಿದರು.
ಇತ್ತ ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ ಮುಂದುವರೆದಿತ್ತು. ಸಚಿವರು ಹಲವು ಮಸೂದೆಗಳನ್ನು ಸದನದಲ್ಲಿ ಮಂಡಿಸಿದರು. ಆದ್ರೆ, ಈ ಎಲ್ಲಾ ಮಸೂದೆಗಳ ಕುರಿತ ಚರ್ಚೆಗಿಂತಲೂ ಇಂಧನ ದರ ಏರಿಕೆ ವಿರೋಧಿಸಿ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯೇ ಮೇಲುಗೈ ಸಾಧಿಸಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ