ಹೊಸ ದಿಲ್ಲಿ: ಲೋಕಸಭಾ ಹಾಗೂ ರಾಜ್ಯಸಭಾ ಕಲಾಪಗಳೆರಡಕ್ಕೂ ತೈಲ ದರ ಏರಿಕೆಯ ಬಿಸಿ ತಟ್ಟಿದೆ. ಮಂಗಳವಾರ ಉಭಯ ಸದನಗಳು ಹಲವು ಬಾರಿ ಮುಂದೂಡಿಕೆಯಾಗಿವೆ. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಭಾರೀ ಗದ್ದಲ, ಕೋಲಾಹಲ ಎಬ್ಬಿಸಿದ್ದು, ಸದಸ್ಯರು ಶಾಂತಿ ಕಾಪಾಡಬೇಕೆಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿವೆ.
ಲೋಕಸಭೆ ಕಲಾಪ ಮಂಗಳವಾರ ಆರಂಭವಾದ ಕೂಡಲೇ ಮುಂದೂಡಬೇಕಾಯ್ತು. ವಿಪಕ್ಷ ಸದಸ್ಯರು ಪ್ರಶ್ನೋತ್ತರ ಕಲಾಪಕ್ಕೂ ಅಡ್ಡಿಪಡಿಸಿದರು. ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಇಂಧನ ದರ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿದರು.
ಡಿಎಂಕೆ ಹಾಗೂ ತೃಣಮೂಲ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಲ್ಲೇ ಎದ್ದು ನಿಂತು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಲೋಕಸಭಾ ಟಿವಿಯು ವಿಪಕ್ಷಗಳ ಮಾತನ್ನು ಪ್ರಸಾರ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಓಂ ಬಿರ್ಲಾ, ನೀವು ಘೋಷಣೆ ಕೂಗೋದನ್ನು ಹಾಗೂ ಸದನಕ್ಕೆ ಅಡ್ಡಿ ಪಡಿಸೋದನ್ನು ಟಿವಿಯಲ್ಲಿ ತೋರಿಸಬೇಕಾ? ದೇಶದ ಜನರು ಈ ದೃಶ್ಯಗಳನ್ನು ನೋಡಬೇಕಾ ಎಂದು ಸವಾಲೆಸೆದರು. ಈ ಪ್ರಶ್ನೆಗೆ ಉತ್ತರಿಸಿದ ಚೌಧರಿ, ಪ್ರತಿಭಟನೆಗಳೂ ಕೂಡಾ ಸಂಸದೀಯ ವ್ಯವಸ್ಥೆಯ ಒಂದು ಭಾಗ ಎಂದು ಹೇಳಿದರು.
ಇತ್ತ ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ ಮುಂದುವರೆದಿತ್ತು. ಸಚಿವರು ಹಲವು ಮಸೂದೆಗಳನ್ನು ಸದನದಲ್ಲಿ ಮಂಡಿಸಿದರು. ಆದ್ರೆ, ಈ ಎಲ್ಲಾ ಮಸೂದೆಗಳ ಕುರಿತ ಚರ್ಚೆಗಿಂತಲೂ ಇಂಧನ ದರ ಏರಿಕೆ ವಿರೋಧಿಸಿ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯೇ ಮೇಲುಗೈ ಸಾಧಿಸಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್