ರಿಯಾದ್: ಕಳೆದ ಏಳು ವರ್ಷಗಳಿಂದ ಸೌದಿ ಅರೇಬಿಯಾದ ತ್ವಾಯಿಫ್ ನಲ್ಲಿ ಜೈಲು ವಾಸದಲ್ಲಿದ್ದ ಉಳ್ಳಾಲ ಮುಕ್ಕಚ್ಚೇರಿಯ ಯುವಕ ನಿಯಾಝ್ ಎಂಬವರು ಮಾರ್ಚ್ 06 ರಂದು ಬಿಡುಗಡೆಯಾಗಿ ತಮ್ಮ ಮನೆಗೆ ತಲುಪಿದ್ದಾರೆ.
ನಿಯಾಝ್ ಎಂಬ ಯುವಕ ಜೈಲಿನಲ್ಲಿರುವ ವಿವರವನ್ನು SSF ಮುಕ್ಕಚ್ಚೇರಿ ಶಾಖೆಯ ಕಾರ್ಯಕರ್ತರು ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆಯ ನೇತಾರರಾದ ಮುಹಮ್ಮದ್ ಮಲೆಬೆಟ್ಟು ರವರಿಗೆ ತಿಳಿಸಿದ್ದರು.ಅಂದಿನಿಂದ ಅವರು ಬಿಡುಗಡೆಯಾಗಿ ಊರಿಗೆ ತಲುಪುವವರೆಗಿನ ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳಿಗೆ ಮುಹಮ್ಮದ್ ಮಲೆಬೆಟ್ಟು ರವರು ನೇತ್ರತ್ವ ನೀಡಿದರು.
ದಾಖಲೆಗಳು ಮಾತ್ರವಲ್ಲದೇ ಅವರ ಬಿಡುಗಡೆಗೆ ಸರಿಸುಮಾರು ಮೂವತ್ತು ಲಕ್ಷ ರೂಪಾಯಿಯಷ್ಟು ಖರ್ಚಾಗಿದ್ದು, ಇದಕ್ಕೆ ಊರಿನಲ್ಲಿ ಹಾಗೂ ಗಲ್ಫ್ ನಲ್ಲಿರುವ ಹಲವಾರು ದಾನಿಗಳು ಸಹಾಯ ಮಾಡಿರುತ್ತಾರೆ. ಅದರಲ್ಲಿ ಪ್ರಮುಖವಾಗಿ ಉಳ್ಳಾಲದ ಉದ್ಯಮಿ ಅಲ್ತಾಫ್ ಸಾಕೋ ರವರು ಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇವರಿಗೆ ಬೆನ್ನೆಲುಬಾಗಿ ನಝೀರ್ ಎಕೆ, ಸೌದಿಯ ಉದ್ಯಮಿಗಳಾದ ಶಾಕಿರ್ Compass, ಅಸ್ಲಮ್ Blue Mart, ಬಶೀರ್ ಸಾಗರ್ Saqco, ವಸೀಮ್ Saqco, NGC ಇಸ್ಮಾಯಿಲ್, ಅಶ್ರಫ್ Saqco, ಶಕೀಲ್ Makavi, ಸಲಾಂ Raqwan, ಇಸ್ಮಾಯಿಲ್ Real Tech, ಹಫೀಝ್ Sasco, ಅಬೂಬಕ್ಕರ್ ಹಾಜಿ ರೈಸ್ಕೋ, ಸಿದ್ದೀಕ್ KMT, ಅಬೂಬಕ್ಕರ್ Face, ಅಶ್ರಫ್ ATL, ಶಮೀಮ್ Llumac, ಝಕರಿಯ್ಯ Muzzain, ಕಲಂದರ್ Spectrum ಹಾಗೂ ಸೌದಿ ಅರೇಬಿಯಾದ ಇನ್ನಿತರ ಹಲವು ಉದ್ಯಮಿಗಳು ಸಹಕಾರ ನೀಡಿದ್ದಾರೆ.
ಊರಿನಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಯು ಟಿ ಖಾದರ್ ರವರ ತಮ್ಮ ಯು ಟಿ ಇಫ್ತಿಕಾರ್, ಶೌಕತ್ Blue Line, ರವೂಫ್ ಪುತ್ತಿಗೆ, ಹಾರಿಸ್ Marine, ಮನ್ಸೂರ್ ಆಝಾದ್, UF ಇಕ್ಬಾಲ್ ಸೇರಿದಂತೆ ಹಲವು ಉದ್ಯಮಿಗಳು ಉತ್ತಮವಾದ ರೀತಿಯಲ್ಲಿ ಸಹಾಯ ನೀಡಿದ್ದಾರೆ.
ಒಟ್ಟಿನಲ್ಲಿ ಹಲವು ಜನರ ಸಹಾಯ ಸಹಕಾರದಿಂದಾಗಿ ಜೈಲಿನಲ್ಲಿ ಇದ್ದ ನಮ್ಮ ನಿಯಾಝ್ ಇಂದು ತಮ್ಮ ಮನೆ ಸೇರುವಂತಾಗಿದೆ.
ರಜೆಯ ನಿಮಿತ್ತ ಊರಿನಲ್ಲಿರುವ ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರು ಡಿಪಿ ಯೂಸುಫ್ ಸಖಾಫಿ ಬೈತಾರ್, ಅಂತರ್ರಾಷ್ಟ್ರೀಯ ಸಮಿತಿ ನೇತಾರರಾದ ನಝೀರ್ ಹಾಜಿ ಕಾಶಿಪಟ್ನ, ಎನ್ ಎಸ್ ಅಬ್ದುಲ್ಲಾ, ಫಾರೂಕ್ ಕಾಟಿಪಳ್ಳ ಹಾಗೂ ಇನ್ನಿತರ ನೇತಾರರು ನಿಯಾಝ್ ರವರ ಮನೆಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ