ಕೊರೋನ ಲಾಕ್ಡೌನ್ ನಂತರ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಗಮನಹರಿಸಿದಾಗ ಹಲವಾರು ಸಮಸ್ಯೆಗಳು ಗೋಚರಿಸುತ್ತಿದೆ. ಅದರಲ್ಲಿ ಮುಖ್ಯವಾಗಿ ಲಾಕ್ಡೌನ್ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗುವ ಉತ್ಸಾಹ ತೋರುತ್ತಿಲ್ಲ. ರಾಜ್ಯದಲ್ಲಿ ನಡೆದ ಕೆಲವು ಅಧ್ಯಯನಗಳ ಪ್ರಕಾರ ಮನೆಯ ಆರ್ಥಿಕ ಪರಿಸ್ಥಿತಿ , ಬಾಲ ಕಾರ್ಮಿಕತೆ, ಶಿಕ್ಷಣದ ಬಗ್ಗೆ ವಿದ್ಯಾರ್ಥಿ- ಪೊಷಕರಿಗೆ ಕಾಳಜಿಯ ಕೊರತೆ , ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ,ನಿರಾಸಕ್ತಿ ಮುಂತಾದ ಹಲವಾರು ಕಾರಣಗಳಿಂದ ಕಳೆದ ಕೊರೋನಾ ಲಾಕ್-ಡೌನ್ ನಂತರ ರಾಜ್ಯದಲ್ಲೇ ಸುಮಾರು ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ಮರು ದಾಖಲಾತಿಗಳನ್ನು ಪಡೆದಿರುವುದಿಲ್ಲ ಎಂಬ ಆಘಾತಕಾರಿ ವರದಿಯನ್ನು ನಮಗೆ ಕಾಣಲು ಸಾಧ್ಯವಾಗಿದೆ. ವಿದ್ಯಾರ್ಥಿಗಳ ಗೈರು ಹಾಜರಾತಿ ಕೂಡ ಗಣನೀಯ ಪ್ರಮಾಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರದಿಯಾಗುತ್ತಿದೆ.
ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳ ಪೈಕಿ ಸುಮಾರು 25 ಸಾವಿರ ಮಂದಿ ಮುಂದಿನ ವಿದ್ಯಾಭ್ಯಾಸ ನಡೆಸುತ್ತಿಲ್ಲ. ಅದೇ ರೀತಿ ಪ್ರಥಮ ಪಿಯುಸಿ ಯಿಂದ ದ್ವಿತೀಯ ಪಿಯುಸಿಗೆ ತೇರ್ಗಡೆ ಆದವರ ಪೈಕಿ 70 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ಇನ್ನೂ ಕೂಡ ದಾಖಲಾಗಿಲ್ಲ. ಅದೇ ರೀತಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಕೂಡ ಗೈರುಹಾಜರಾಗುತ್ತಿರುವ ಸಂಖ್ಯೆ ಬಹಳ ಹೆಚ್ಚಿದೆ.
ಶಾಲಾ ಕಾಲೇಜು ಅರ್ಧದಲ್ಲಿ ಮೊಟಕುಗೊಳಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬದಲಾಗಿ ಕುಟುಂಬ ನಿರ್ವಹಣೆ ಮಾಡಲು ಬೇಸಾಯ ,ಕೂಲಿ, ಕಾರ್ಖಾನೆಗಳಿಗೆ ದುಡಿಮೆಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿದೆ.
ಇದರ ಗಂಭೀರತೆಯನ್ನು ಮನಗಂಡು ಸಮಾಜದಲ್ಲಿ ಯಾರು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ‘ಉತ್ತಮ ಭವಿಷ್ಯಕ್ಕಾಗಿ ಕಾರ್ಯಪ್ರವೃತ್ತರಾಗೋಣ’ಎಂಬ ಘೋಷಾ ವಾಕ್ಯದೊಂದಿಗೆ “ಝೀರೋ ಡ್ರಾಪ್ ಔಟ್” ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ, ವಿದ್ಯಾರ್ಥಿಗಳ ಸಮಾಲೋಚನೆ, ಜಾಗೃತಿ ಕಾರ್ಯಕ್ರಮ, ಪೋಷಕರ ಸಭೆ, ಹೆಲ್ಪ್ ಡೆಸ್ಕ್ ಮುಂತಾದ ಕಾರ್ಯಕ್ರಮಗಳು ನಡೆಯಲಿಕ್ಕಿದೆ.
ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು, ಪೋಷಕರು, ಅಧಿಕಾರಿಗಳು ಅಭಿಯಾನದಲ್ಲಿ ನಮ್ಮೊಂದಿಗೆ ಕೈಜೋಡಿಸಿ ಅಭಿಯಾನವನ್ನು ಯಶಸ್ವಿಗೊಳಿಸುವಲ್ಲಿ ಕಾರಣಕರ್ತರಾಗಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇವೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ