ಮಂಗಳೂರು :- ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ರಾಜ್ಯಾದ್ಯಂತ ಝೀರೋ ಡ್ರಾಪೌಟ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದು ಇದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಜ್ಯೋತಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಗಾಂಜಾ ಮಾಫಿಯಾ ಸಕ್ರಿಯವಾಗಿದೆ ಎಂಬುದಕ್ಕೆ ಈ ಘಟನೆಯು ಸ್ಪಷ್ಟ ಉದಾಹರಣೆಯಾಗಿದೆ. ನ್ಯಾಯ ಒದಗಿಸಬೇಕಾದ ಪೊಲೀಸರು ಗಾಂಜಾ ಮಾಫಿಯದೊಂದಿಗೆ ಆಂತರಿಕವಾಗಿ ಶಮಿಲಾಗಿದ್ದಾರೆಯೇ ಎಂಬುದಕ್ಕೆ ಸಾರ್ವಜನಿಕರಲ್ಲಿ ಸಂಶಯ ಮೂಡಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಡ್ರಾಪೌಟ್ ಆಗುತ್ತಿದ್ದು, ಇದನ್ನು ಮನಗಂಡು ಕ್ಯಾಂಪಸ್ ಫ್ರಂಟ್ ನಡೆಸುತ್ತಿರುವ ಝೀರೋ ಡ್ರಾಪೌಟ್ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮ ನಡೆಸಲು ತೆರಳಿದ ಕ್ಯಾಂಪಸ್ ಫ್ರಂಟ್ ನಾಯಕರನ್ನು ಬಂಧಿಸಿ , ಠಾಣೆಯಲ್ಲಿ ಹಲ್ಲೆ ನಡೆಸಿದ ಪೋಲಿಸರ ನಡೆಯ ಕುರಿತು ತೀವ್ರ ಅಸಮಾಧಾನವಾಗಿದ್ದು, ಉನ್ನತ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಶೀಘ್ರ ಸೂಕ್ತ ಕ್ರಮ ಕೈಗೊಂಡು ಹಲ್ಲೆ ನಡೆಸಿದ ಗಾಂಜಾ ವ್ಯಸನಿಗಳಿನ್ನು ಬಂಧಿಸಿ, ದರ್ಪ ಮೆರೆದ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ವಜಾ ಮಾಡಬೇಕೆಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಸಾಧಿಕ್ ಜಾರತ್ತಾರು ಆಗ್ರಹಿಸಿದರು.

ಉಳ್ಳಾಲ ಪೋಲಿಸರ ಕ್ರೌರ್ಯತೆಯನ್ನು ವಿದ್ಯಾರ್ಥಿ ಸಮುದಾಯ ಸಹಿಸಲ್ಲ, ಕಾನೂನು ಹೋರಾಟದ ಮೂಲಕ ಅವರಿಗೆ ಉತ್ತರ ನೀಡಲಿದ್ದೇವೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಮುರ್ಶಿದಾ ಮಂಗಳೂರು ಪ್ರತಿಭಟನೆಯಲ್ಲಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಇಹ್ತಿಶಾಮ್ , ಕೋಶಾಧಿಕಾರಿ ಸುಲ್ತಾನ್ , ಕ್ಯಾಂಪಸ್ ಫ್ರಂಟ್ ಗ್ರಾಮಾಂತರ ಜಿಲ್ಲಾಧ್ಯಕ್ಷ ಸರ್ಫುದ್ದೀನ್ ಮಂಗಳೂರು, ಕಾರ್ಯದರ್ಶಿ ಅಶ್ರಫ್ ಜೋಕಟ್ಟೆ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?