ಮಂಗಳೂರು,ಮಾ.30: ನಿನ್ನೆ ತಡ ರಾತ್ರಿ ಮಂಗಳೂರು ಸಮೀಪದ ಫರಂಗಿಪೇಟೆ ಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಯ ಮುಅಝ್ಝಿನ್ ರವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಮಸೀದಿಗೆ ನುಗ್ಗಿ ಹಲ್ಲೆ ನಡೆಸಿರುತ್ತಾರೆ.
ದುಷ್ಕರ್ಮಿಗಳ ಈ ಕೃತ್ಯವು ಮತೀಯ ಸೌಹಾರ್ದವನ್ನು ಕೆಡಿಸುವ ಹುನ್ನಾರವಾಗಿದೆ. ಮುಸ್ಲಿಮ್ ಧಾರ್ಮಿಕ ಕೇಂದ್ರಗಳ ಮೇಲೆ ಧಾಳಿ ನಡೆಸಿ ಆ ಮೂಲಕ ಒಂದು ಧರ್ಮದ ಜನರ ಭಾವನೆಗಳನ್ನು ಕೆರಳಿಸಿ, ಕೋಮು ಪ್ರಚೋದನೆಗೆ ಅವಕಾಶ ಮಾಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ. ಇದನ್ನು ಮುಸ್ಲಿಮ್ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ.
ಇತ್ತೀಚೆಗೆ ಇಂತಹ ಹಲವಾರು ಕೋಮು ಪ್ರಚೋದನಾ ಕೃತ್ಯಗಳು ಅಲ್ಲಲ್ಲಿ ಕಾಣತೊಡಗಿವೆ. ಮೊದಲೇ ಕೋಮು ಸೂಕ್ಷ್ಮವಾದ ಈ ಜಿಲ್ಲೆಯಲ್ಲಿ ಇದರಿಂದಾಗಿ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟಾಗುತ್ತಿವೆ.
ಈ ಕೃತ್ಯವನ್ನು ಯಾರೇ ಮಾಡಿದರೂ, ಗ್ರಹ ಇಲಾಖೆ ಕೂಡಲೇ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ನ್ಯಾಯವನ್ನು ಒದಗಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ ಅಶ್ರಫ್ (ಮಾಜಿ ಮೇಯರ್) ಎಚ್ಚರಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್