ಮಕ್ಕಾ: ಪವಿತ್ರ ರಂಜಾನ್ ತಿಂಗಳಲ್ಲಿ ಉಮ್ರಾ ನಿರ್ವಹಿಸಲು ಸೌದಿ ಅರೇಬಿಯಾದಿಂದ ಮಕ್ಕಾಗೆ ಆಗಮಿಸುವ ಯಾತ್ರಿಕರು ಕೋವಿಡ್ ಲಸಿಕೆ ಪಡೆಯುವ ಅಗತ್ಯವಿಲ್ಲ ಎಂದು ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯ ಹೇಳಿದೆ. ಆದರೆ, ಹಜ್ ಮತ್ತು ಉಮ್ರಾ ಯಾತ್ರಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳು ರಂಜಾನ್ ಪ್ರಾರಂಭವಾಗುವ ಮೊದಲು ಲಸಿಕೆ ಹಾಕಿಸಬೇಕು. ಲಸಿಕೆ ಪಡೆಯದ ಸಿಬ್ಬಂದಿಗಳು ಪ್ರತಿ ವಾರ ಪಿಸಿಆರ್ ನಕಾರಾತ್ಮಕ ಪ್ರಮಾಣಪತ್ರವನ್ನು ಒದಗಿಸಬೇಕಾಗುತ್ತದೆ.
ಯಾತ್ರಾರ್ಥಿಗಳಿಗೆ ಲಸಿಕೆ ಕಡ್ಡಾಯವಲ್ಲದಿದ್ದರೂ, ಮುಖವಾಡ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು, ಉಮ್ರಾ ಮತ್ತು ಪ್ರಾರ್ಥನೆಗಾಗಿ ಪರವಾನಗಿ ಪಡೆಯುವುದು, ಮತ್ತು ತವಕಲ್ನಾ ಆ್ಯಪ್ ಸಕ್ರಿಯಗೊಳಿಸುವಂತಹ ಎಲ್ಲಾ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ನಿಯಮಗಳನ್ನು ಪಾಲಿಸದವರನ್ನು ಕಂಡುಹಿಡಿಯಲು ರಂಜಾನ್ ಸಮಯದಲ್ಲಿ ತಪಾಸಣೆ ತೀವ್ರಗೊಳಿಸಲಾಗುವುದು ಎಂದು ಪುರಸಭೆ ಮತ್ತು ಗ್ರಾಮೀಣ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.
ರಂಜಾನ್ ಸಮಯದಲ್ಲಿ ಮಸೀದಿ ದಟ್ಟಣೆಯಿಂದ ಕೂಡಿರುವುದರಿಂದ ಸಮಯ ನಿಷ್ಠೆಯನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಮಕ್ಕಾಗೆ ಭೇಟಿ ನೀಡುವವರಿಗೆ ಎಚ್ಚರಿಕೆ ನೀಡಿದ್ದಾರೆ. ಪರವಾನಗಿಯಲ್ಲಿ ನೋಂದಾಯಿಸಿರುವ ಸಮಯ ಪ್ರಕಾರ ಅಲ್-ಹರಮ್ ಮಸೀದಿಗೆ ಆಗಮಿಸಿ ಇದನ್ನು ವ್ಯವಸ್ಥೆಗೊಳಿಸಬೇಕು. ಸಮಯಕ್ಕೆ ಮುಂಚಿತವಾಗಿ ಮಕ್ಕಾವನ್ನು ಪ್ರವೇಶಿಸಲು ಪ್ರಯತ್ನಿಸಿದ್ದಲ್ಲಿ ಗಡಿಯಲ್ಲಿರುವ ಚೆಕ್ ಪೋಸ್ಟ್ಗಳಿಂದ ಹಿಂತಿರುಗಿಸಲಾಗುವುದು. 18 ರಿಂದ 70 ವರ್ಷದೊಳಗಿನ ಜನರು ಇಅ್ ತಮರ್ನಾ ಆ್ಯಪ್ ಮೂಲಕ ಉಮ್ರಾ ನಿರ್ವಹಿಸಲು ಅನುಮತಿ ಪಡೆಯಬಹುದು.
ರಂಜಾನ್ ತಿಂಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಉಮ್ರಾ ಯಾತ್ರಿಕರು ಪವಿತ್ರ ನಗರವನ್ನು ತಲುಪುವ ನಿರೀಕ್ಷೆಯಿದೆ. ವಿದೇಶಗಳಿಂದ ಬರುವ ಯಾತ್ರಾರ್ಥಿಗಳು ಲಸಿಕೆ ಪಡೆದಿದ್ದರೂ, ಅವರು ಸೌದಿ ಅರೇಬಿಯಾಕ್ಕೆ ಬಂದ 3 ದಿನಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಬೇಕು. ಈ ವರ್ಷ ಸೌದಿ ಅರೇಬಿಯಾದಿಂದ ಹಜ್ಗೆ ಆಗಮಿಸುವ ಯಾತ್ರಿಕರು ದುಲ್ ಹಜ್ಗೆ ಮೊದಲು ಎರಡು ಡೋಸ್ ಲಸಿಕೆಗಳನ್ನು ಪಡೆದಿರಬೇಕು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ