ಉಳ್ಳಾಲ: ಇಲ್ಲಿನ ಕೆ.ಸಿ ರೋಡು ಬಳಿ ಬಾಲಕನ ಕೊಲೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಪೊಲೀಸರು ಆತನ ಪಬ್ಜಿ ಜತೆಗಾರ ದೀಪಕ್ (18)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಕೀಫ್ ಯಾವತ್ತೂ ಪಬ್ ಜಿ ಆಟದಲ್ಲಿ ಗೆಲ್ಲುತ್ತಿದ್ದ. ನೆರೆಮನೆಯ ನಿವಾಸಿ ದೀಪಕ್ ಜತೆಗೂ ಆಟಕ್ಕೆ ಮುಂದಾಗಿದ್ದ. ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ದೀಪಕ್, ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಸವಾಲು ಹಾಕಿದ್ದ. ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ದೀಪಕ್- ಹಕೀಫ್ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಕೀಫ್ ಸಣ್ಣ ಕಲ್ಲೆಸೆದು ದೀಪಕ್ಗೆ ಹಲ್ಲೆ ನಡೆಸಿದ್ದ. ಇದರಿಂದ ರೊಚ್ಚಿಗೆದ್ದ ದೀಪಕ್ ದೊಡ್ಡ ಕಲ್ಲನ್ನು ಹಕೀಫ್ ಮೇಲೆ ಹಾಕಿದಾಗ ವಿಪರೀತ ರಕ್ತಸ್ರಾವ ಉಂಟಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದಿದ್ದ. ಗಾಬರಿಗೊಂಡ ದೀಪಕ್ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಭಾನುವಾರ ಬೆಳಿಗ್ಗೆ ಸ್ಥಳೀಯರು ಹಕೀಫ್ನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೀಪಕ್ ನನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಸ್ಥಳಕ್ಕೆ ಕಮೀಷನರ್ ಭೇಟಿ: ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜಿ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್ (12) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು.ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ