ಮಕ್ಕಾ: ರಂಜಾನ್ ಸಮಯದಲ್ಲಿ ಮಕ್ಕಾಗೆ ಆಗಮಿಸುವ ವಿಶ್ವಾಸಿಗಳನ್ನು ಸ್ವೀಕರಿಸಲು ಸಿದ್ಧತೆಗಳು ನಡೆಯುತ್ತಿವೆ. ಹರಮ್ ಮಸೀದಿಯಲ್ಲಿ ಪ್ರಾರ್ಥನೆ ಮತ್ತು ಉಮ್ರಾಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜಿದ್ದಾದ ಕಿಂಗ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣವೂ ವಿಶ್ವಾಸಿಗಳನ್ನು ಸ್ವೀಕರಿಸಲು ಸಿದ್ಧವಾಗಿದೆ.
ರಂಜಾನ್ನಲ್ಲಿ ಪ್ರತಿ ದಿನ ಅರ್ಧ ಲಕ್ಷ ಜನರಿಗೆ ಉಮ್ರಾ ಮತ್ತು ಒಂದು ಲಕ್ಷ ಮಂದಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡುವಂತೆ ಮಕ್ಕಾದ ಮಸೀದಿ ಅಲ್-ಹರಮ್ನಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ರಂಜಾನ್ ಸಮಯದಲ್ಲಿ ಮಕ್ಕಾದ ಹರಮ್ ಮಸೀದಿಯಲ್ಲಿ ವಿಶ್ವಾಸಿಗಳ ಸೇವೆಗಾಗಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಸುಮಾರು 4,500 ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
COVID-19 ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಉಮ್ರಾ ನಿರ್ವಹಿಸಲು ಅಥವಾ ಗ್ರ್ಯಾಂಡ್ ಮಸೀದಿಯಲ್ಲಿ ಪ್ರಾರ್ಥನೆಗಳಿಗೆ ಹಾಜರಾಗಲು COVID-19 ವಿರುದ್ಧ ಲಸಿಕೆಯನ್ನು ಪಡೆದಿರುವುದು ಕಡ್ಡಾಯ.
ತ್ವವಾಫ್ ಪ್ರದರ್ಶನಕ್ಕಾಗಿ 14 ಸಾಲುಗಳಿವೆ.ಕಅ್ ಬಾದ ಸಮೀಪದ ಮೊದಲ ಮೂರು ಸಾಲುಗಳು ವೃದ್ಧರು, ದುರ್ಬಲರು ಮತ್ತು ಅಂಗವಿಕಲರಿಗಾಗಿ ಸೀಮಿತ. ತ್ವವಾಫ್ ಮತ್ತು ಇತರ ಆಚರಣೆಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ವಿಮಾನ ನಿಲ್ದಾಣಕ್ಕೆ ಬರುವ ಯಾತ್ರಾರ್ಥಿಗಳಿಗೆ ಸೇವೆ ಸಲ್ಲಿಸಲು ನಾಗರಿಕ ವಿಮಾನಯಾನ ಪ್ರಾಧಿಕಾರದ ಅಡಿಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಜಿದ್ದಾದ ಕಿಂಗ್ ಅಬ್ದುಲ್ ಅಝೀಝ್ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ನಾರ್ತ್ ಟರ್ಮಿನಲ್ ನಲ್ಲಿ ಯಾತ್ರಿಕರನ್ನು ಸ್ವೀಕರಿಸಲು ಮತ್ತು ಮರಳಲು ವ್ಯವಸ್ಥೆ ಮಾಡಲಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ