ಮಂಗಳೂರು: ಇಲ್ಲಿನ ಬಜಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಧ್ಯರಾತ್ರಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಹವಾಮಾನ ವೈಪರೀತ್ಯದ ಕಾರಣದಿಂದ ಕೊಚ್ಚಿಯಲ್ಲಿ ಇಳಿಯಿತು. ಇದರಿಂದ ಪ್ರಯಾಣಿಕರು ಪರದಾಟ ನಡೆಸಬೇಕಾದ ಪ್ರಸಂಗ ಎದುರಾಯಿತು.
ದುಬೈನಿಂದ ಮಂಗಳೂರಿಗೆ 118 ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ 1XE 384 ವಿಮಾನ ಹೊರಟಿತ್ತು. ಮಧ್ಯರಾತ್ರಿ 12:30 ಕ್ಕೆ ಸಮಯದಲ್ಲಿ ಬಜಪೆ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಮಂಗಳೂರಿನಲ್ಲಿ ಸಿಡಿಲು ಮಳೆಯಾಗುತ್ತಿದ್ದ ಕಾರಣ ಲ್ಯಾಂಡ್ ಮಾಡಲಾಗದೆ ಕೊಚ್ಚಿಗೆ ತೆರಳಿತ್ತು.
ತಡರಾತ್ರಿ ಏಕಾಏಕಿ ಕೊಚ್ಚಿಯಲ್ಲಿ ಲ್ಯಾಂಡ್ ನಿಂದ ಪ್ರಯಾಣಿಕರು ಪರದಾಟ ನಡೆಸುವಂತಾಯಿತು. ಅರ್ಧಗಂಟೆಯಲ್ಲಿ ಪುನ: ಮಂಗಳೂರಿಗೆ ತೆರಳುವುದೆಂದು ಸಿಬ್ಬಂದಿಗಳು ಪ್ರಯಾಣಿಕರನ್ನು ವಿಮಾನದಲ್ಲಿ ಕುಳ್ಳಿರಿಸಿದ್ದರು. ಆದರೆ ಮುಂಜಾನೆಯಾದರೂ ಮಂಗಳೂರಿಗೆ ಪ್ರಯಾಣ ಬೆಳಸದೇ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು.
ರಾತ್ರಿಯಿಡೀ ಊಟ ನಿದ್ದೆಯಿಲ್ಲದೇ ಪ್ರಯಾಣಿಕರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಮಯ ಕಳೆಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಇಂದು ಮತ್ತೆ ಕೊಚ್ಚಿಯಿಂದ ಮಂಗಳೂರಿಗೆ ವಿಮಾನ ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ