ಹರಿದ್ವಾರ: ಇಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಸೋಂಕಿನಿಂದಾಗಿ ಸಾಧುವೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ ಈ ಧಾರ್ಮಿಕದಲ್ಲಿ ಮೇಳದಲ್ಲಿ ಭಾಗಿಯಾದ 80 ಸಾಧು ಸಂತರಲ್ಲಿ ಕೋವಿಡ್ ದೃಢಗೊಂಡಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಈ ಮೇಳ ನಡೆಸಲಾಗುತ್ತಿದೆ ಎಂದು ಹೇಳಿದರೂ ಅನೇಕ ಭಕ್ತರು ಕೋವಿಡ್ ನಿಯಮಾವಳಿಗಳನ್ನು ನಿರ್ಲಕ್ಷಿಸುತ್ತಿರುವುದು ಕಂಡು ಬಂದಿದೆ. ಕಳೆದ 24 ಗಂಟೆಯೊಳಗೆ ಹರಿದ್ವಾರದಲ್ಲಿ 2 ಲಕ್ಷದ 17 ಸಾವಿರ ಹೊಸ ಪ್ರಕರಣ ದಾಖಲಾಗಿದೆ. ಕುಂಭ ಮೇಳ ಆರಂಭವಾದ ದಿನದಿಂದ ಅಂದರೆ, ಏಪ್ರಿಲ್ 1ರಿಂದ 20 ಲಕ್ಷಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ ಎಂದು ಹರಿದ್ವಾರದ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ಎರಡನೇ ಅಲೆಯಿಂದ ದೇಶ ತತ್ತರಿಸುತ್ತಿರುವ ಈ ಸಂದರ್ಭದಲ್ಲಿ ಕುಂಭ ಮೇಳ ನಡೆಸುವ ಬಗ್ಗೆ ತಜ್ಞರು ಈ ಹಿಂದೆಯೇ ಎಚ್ಚರಿಸಿದ್ದರು. ಅಲ್ಲದೇ ಈ ಕುಂಭ ಮೇಳದ ಕೋವಿಡ್ ಸೂಪರ್ಸ್ಪ್ರೆಡರ್ ಆಗಲಿದೆ ಎಂದು ಕೂಡ ತಿಳಿಸಿದ್ದರು. ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಿರುವ ಬಗ್ಗೆ ಅನೇಕ ಆಕ್ಷೇಪಗಳು ವ್ಯಕ್ತವಾಗಿದ್ದು, ಅಲ್ಲದೆ ಈ ಕುಂಭ ಮೇಳವನ್ನು ಮೊಟಕುಗೊಳಿಸುವಂತೆ ಕೂಡ ಅನೇಕರು ಒತ್ತಾಯಿಸಿದ್ದರು. ಈ ನಡುವೆ ಸರ್ಕಾರ ಮಾತ್ರ ಎರಡುವಾರ ಮುಂಚೆ ಈ ಕುಂಭ ಮೇಳವನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಗಂಗಾ ನದಿಯ ತಟದಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಈ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಲು ದೇಶದ ಮೂಲೆ ಮೂಲೆಯಿಂದ ಭಕ್ತರು, ಸಂತರು ಆಗಮಿಸುತ್ತಾರೆ. ಅತಿಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುವ ಹಿನ್ನಲೆ ಸ್ನಾನ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿತ್ತು. ಆದರೆ, ಈ ಸಲಹೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.
ಹಿಂದೂ ಅಕಾದಸ್ ಮುಖ್ಯಸ್ಥ ಮಹಾಮಂಡಲೇಶ್ವರ ಕಪಿಲ್ ದೇವ್ ಅವರಿಗೆ ಸೋಂಕು ಕಾಣಿಸಿಕೊಂಡು ಗುರುವಾರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕುಂಭ ಮೇಳಕ್ಕೆ ಹಾಜರಾಗುವ ಭಕ್ತರು 72 ಗಂಟೆಗಳ ಮುಂಚೆ ಕೊವೀಡ್ ನೆಗಟಿವ್ ವರದಿ ನೀಡಬೇಕು. ಈ ನಡುವೆ ಸೋಮವಾರ ಕುಂಭಮೇಳದಲ್ಲಿ ಭಾಗಿಯಾಗಿದ್ದ ಭಕ್ತರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಸುಮಾರು 2000ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಂಡು ಬಂದಿದೆ.
ಪ್ರತಿನಿತ್ಯ 25 ಸಾವಿರಕ್ಕೂ ಹೆಚ್ಚು ಭಕ್ತರು ಪ್ರತಿನಿತ್ಯ ಕುಂಭ ಮೇಳದಲ್ಲಿ ಭಾಗಿಯಾಗುತ್ತಿದ್ದಾರೆ. ಇನ್ನು ಏ. 27 ರಂದು ನಡೆಯುವ ಪವಿತ್ರ ದಿನದಂದು 2-3 ಮಿಲಿಯನ್ ಜನರು ಭಾಗಿಯಾಗುವ ನಿರೀಕ್ಷೆ ಕೂಡ ಇದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ