ಮಂಗಳೂರು: ಪವಿತ್ರ ರಂಜಾನ್ನಲ್ಲಿ ಧಾರ್ಮಿಕ ಉಪನ್ಯಾಸ ನೀಡಲು ಆಗಮಿಸಿದ್ದ ಮುತಅಲ್ಲಿಂ (ಧಾರ್ಮಿಕ ವಿದ್ಯಾರ್ಥಿ) ಒಬ್ಬರು ಮಸೀದಿಯಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ಹೊರವಲಯದ ಮರಕಡದಲ್ಲಿ ನಡೆದಿದೆ.
ಸುಳ್ಯ ಸಮೀಪದ ಅಜ್ಜಾವರದ ಹಸೈನಾರ್ ಹಾಜಿ-ಝಹುರಾ ದಂಪತಿಯ ಪುತ್ರ ಅಬ್ದುಲ್ ಅಲ್ ಸಿನಾನ್ ಅಜ್ಜಾವರ (20) ಮೃತಪಟ್ಟ ಯುವಕ.
ದರ್ಸ್ ವಿದ್ಯಾರ್ಥಿಗಳು ಸಾಮಾನ್ಯವಾಗಿ ರಮಝಾನ್ನಲ್ಲಿ ಧಾರ್ಮಿಕ ಉಪನ್ಯಾಸ (ಉರ್ದಿ) ತರಬೇತಿ ಪಡೆಯಲು ಮಸ್ಜಿದ್’ಗಳಿಗೆ ತೆರಳುವುದು ವಾಡಿಕೆ. ಅದರಂತೆ ಸಿನಾನ್ ಕೂಡ ಶುಕ್ರವಾರ ಮುಸ್ಸಂಜೆ ನಗರದ ಹೊರವಲಯದ ಮರಕಡದ ಜುಮಾ ಮಸೀದಿಗೆ ತೆರಳಿದ್ದರು. ಉಪವಾಸ ವೃತ ತೊರೆದು, ತರಾವೀಹ್ ನಮಾಜ್ ಮುಗಿಸಿ ಉಪನ್ಯಾಸವನ್ನೂ ನೀಡಿದ್ದರು.
ಇಂದು ಬೆಳಗ್ಗೆ ಸಹರಿಗೆ ಎದ್ದು ಊಟ ಮಾಡಿದ ಬಳಿಕ ಊಟದ ತಟ್ಟೆ ತೊಳೆಯುತ್ತಿದ್ದಾಗ ಸಿನಾನ್ ಕುಸಿದು ಬಿದ್ದಿದ್ದರು. ಮರಕಡ ಜುಮಾ ಮಸೀದಿಯ ಖತೀಬ್ ಇಸ್ಹಾಕ್ ಸಖಾಫಿ ಕೂಡ ಸಿನಾನ್ನ ಸಂಬಂಧಿಯಾಗಿದ್ದು, ಮೃತ ವಿದ್ಯಾರ್ಥಿಗೆ ಮೂರ್ಛೆರೋಗ (ಫಿಟ್ಸ್) ಇರುವ ಬಗ್ಗೆ ತಿಳಿದಿದ್ದ ಅವರು ತಕ್ಷಣ ಮನೆಯವರಿಗೆ ಮಾಹಿತಿ ನೀಡಿದ್ದರು. ಮನೆಯವರ ಸೂಚನೆಯ ಮೇರೆಗೆ ಕುಸಿದು ಬಿದ್ದಿದ್ದ ಸಿನಾನ್ನನ್ನು ಅಲ್ಲೇ ಮಲಗಲು ವ್ಯವಸ್ಥೆ ಕಲ್ಪಿಸಿದ್ದರು. ಆದರೆ 8 ಗಂಟೆಯಾದರೂ ಎದ್ದೇಳದ ಕಾರಣ ಮನೆಯವರ ಗಮನಕ್ಕೆ ತರಲಾಯಿತು. ಮತ್ತೆ ಅವರ ಸೂಚನೆಯ ಮೇರೆಗೆ ಇಸ್ಹಾಕ್ ಸಖಾಫಿಯವರು ಸಿನಾನ್ನನ್ನು ಎಬ್ಬಿಸಲು ಪ್ರಯತ್ನಿಸಿದರು. ಆದರೆ ಸಿನಾನ್ ಮಲಗಿದಲ್ಲೇ ಮೃತಪಟ್ಟಿದ್ದರು.
ಇವರು ಮುಹಿಮ್ಮಾತ್ ಪೂರ್ವ ವಿದ್ಯಾರ್ಥಿ ಆಗಿದ್ದರು, ಮುಹಿಮ್ಮಾತ್ ಹಿಫ್’ಳುಲ್ ಕುರ್ಆನ್ ಕಾಲೇಜಿನಲ್ಲಿ ಕುರ್ಆನ್ ಹಿಫ್’ಳ್ ಮಾಡಿದ್ದರು. ಪ್ರಸ್ತುತ, ಕುಂಬ್ರ ಕೆಐಸಿ ದ್ವಿತೀಯ ತರಗತಿಯ ವಿದ್ಯಾರ್ಥಿಯಾಗಿ ಬಿಕಾಂ ಕಲಿಯುತ್ತಿದ್ದರು. ಓದುವ ಹವ್ಯಾಸದೊಂದಿಗೆ ಪ್ರತಿಭಾವಂತ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಪ್ರಚಲಿತ ವಿದ್ಯಮಾನದ ಬಗ್ಗೆ ಸಹಪಾಠಿಗಳ ಜೊತೆ ಚರ್ಚೆ ನಡೆಸುತ್ತಿದ್ದರು.
ಹಸೈನಾರ್ ಹಾಜಿ-ಝಹುರಾ ದಂಪತಿಯ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯ ಸಹಿತ ಮೂವರು ಮಕ್ಕಳಲ್ಲಿ ಸಿನಾನ್ ಹಿರಿಯ ಮಗನಾಗಿದ್ದ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ