ಬೆಂಗಳೂರು,ಏ.17: ಸೋಂಕು ಹೆಚ್ಚಳದ ಹಿನ್ನಲೆ ಇನ್ಮುಂದೆ ರಾಜ್ಯದಲ್ಲಿ ಯಾವುದೇ ಜಾತ್ರೆ ನಡೆಯಬಾರದು. ಜಾತ್ರೆಗಳು ನಡೆದರೆ ಆಯಾ ಡಿಸಿಗಳೇ ಹೊಣೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅವರು ಇಂದು ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ಸೋಂಕು ಹೆಚ್ಚಳ ಹಿನ್ನಲೆ ಯಾವುದೇ ಕಾರಣಕ್ಕೂ ಜಾತ್ರೆಗಳಿಗೆ ಅವಕಾಶವಿಲ್ಲ.
ಒಂದು ವೇಳೆ ಅವಕಾಶ ಕೊಟ್ಟರೆ ಡಿಸಿ,ಎಸ್ಪಿ ಡಿಸ್ಮಿಸ್ ಮಾಡುತ್ತೇವೆ ಎಂದು ಎಚ್ಚರಿಸಿದರು. ಜನಸಂದಣಿತಯಾಗದಂತೆ ಎಲ್ಲಾ ರೀತಿಯ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಲಾಗಿದೆ. ಇನ್ಮುಂದೆ ಮದುವೆ ಸಮಾರಂಭಗಳಿಗೆ ಪಾಸ್ ಕಡ್ಡಾಯವಾಗಿದೆ. ಒಳಾಂಗಣದಲ್ಲಿ 100 ಜನರಿಗೆ ಅವಕಾಶವಿದ್ದು, ಹೊರಾಂಗಣದಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಮದುವೆಗೆ ಮುನ್ನ ಸಮೀಪದ ಠಾಣೆಯಲ್ಲಿ ಪಾಸ್ ಪಡೆಯಬೇಕು ಎಂದು ತಿಳಿಸಿದರು.
ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ಪಾಸ್ ನಿಯಮ ಅನ್ವಯವಿಲ್ಲ. ಇನ್ಮುಂದೆ ಬುಕ್ ಆಗೋ ಮದುವೆಗಳಿಗೆ ಪಾಸ್ ಕಡ್ಡಾಯವಾಗಿದೆ. ಹೊಸದಾಗಿ ನಡೆಯುವುದಕ್ಕೆ ಪಾಸ್ ಅಗತ್ಯ. ರಾಜಕೀಯ ಸಭೆ,ಸಮಾರಂಭಗಳಿಗೂ ಇದು ಅನ್ವಯ. ರಾಜ್ಯದಲ್ಲಿ ಎಲ್ಲಿಯೂ ಆಕ್ಸಿಜನ್ ಸಮಸ್ಯೆ ಆಗಬಾರದು. ಯಾವುದೇ ಕಾರಣಕ್ಕೂ ಕೋವಿಡ್ ಸೋಂಕಿರಿಗೆ ಬೆಡ್ ಕೊರತೆ ಆಗಬಾರದು.ಎಲ್ಲಾಕಡೆ ಈಗಿನಿಂದಲೇ ಬೆಡ್ ವ್ಯವಸ್ಥೆ ಆಗಬೇಕು. ಕೊವೀಡ್ ನಿರ್ವಹಣೆಗೆ ಡಿಸಿಗಳು ಕೇಳಿದ್ದ ಹಣ ಬಿಡುಗಡೆ ಮಾಡಲಾಗುವುದು. ಕೊವೀಡ್ ನಿಂದ ಮೃತಪಟ್ಟವರ ನ್ನು ಗೌರವ ಯುತವಾಗಿ ಅಂತ್ಯಸಂಸ್ಕಾರ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಡಿಸಿಗಳೊಂದಿಗೆ ಇಂದು ಚರ್ಚೆ ನಡೆಸಿದ್ದು, ಬೆಂಗಳೂರಿಗೆ ಸಂಬಂಧಿಸಿ ಸೋಮವಾರ ಸಭೆ ನಡೆಸಲಾಗುವುದು. ರಾಜಧಾನಿಯಲ್ಲಿ ಸೋಂಕು ಹೆಚ್ಚಳ ಸಂಬಂಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಮುನ್ನ ಶಾಸಕರು, ಸಂಸದರ ಜತೆ ಚರ್ಚಿಸಿ ಕಠಿಣಕ್ರಮ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಯಿ ತಿಳಿಸಿದರು.
ಎಪ್ರಿಲ್ 20ರವರೆಗೆ ರಾಜಧಾನಿ ಸೇರಿದಂತೆ 7 ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಮಾತ್ರ ಕರ್ಫ್ಯೂ ಇದೆ. ಏಪ್ರಿಲ್ 20ರ ಬಳಿಕ ಮತ್ತಷ್ಟು ಬಿಗಿ ಕ್ರಮ ಮಾಡುವ ವಿಚಾರ ನಡೆಸಲಾಗಿದೆ. ಸದ್ಯಕ್ಕೆ ಇಂದು ಸಭೆ ಮಾಡಿ, ಇಷ್ಟು ಕ್ರಮ ಮಾಡಿದ್ದೇವೆ. ಸಿಎಂ ಬಿಎಸ್ವೈ ಗುಣಮುಖರಾದ ನಂತರ ಮತ್ತೆ ಸಭೆ ನಡೆಸಿ, ಅವಾಗ ಮತ್ತಷ್ಟು ಬಿಗಿ ಕ್ರಮ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಗೃಹ ಸಚಿವರು ತಿಳಿಸಿದರು.
ಸೋಂಕಿನ ತೀವ್ರತೆ ಗಮನಿಸಿದರೆ ಕಳೆದ ಬಾರಿ ಕೇಸ್ ಗಿಂತ ಈ ಬಾರಿ ಹೆಚ್ಚು ಆಗಬಹುದು. ಬೇರೆ ದೇಶಗಳಲ್ಲಿ ಮೂರನೇ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ನಾವು ಆ ಹಂತಕ್ಕೆ ಗೆ ಹೋಗಬಾರದು. ವಾರ್ ಪುಟಿಂಗ್ ಮಾದರಿಯಲ್ಲಿ ಕ್ರಮಜರುಗಿಸುತ್ತೇವೆ. ಎರಡನೇ ಅಲೆಯನ್ನ ನಿಯಂತ್ರಿಸಬೇಕು ಅದಕ್ಕೆ ಯಾವುದೇ ಸಮಸ್ಯೆ ಆಗಬಾರದು. ಡೇಟಾ ಎಂಟ್ರಿ ಸಮಸ್ಯೆ ಆಗಬಾರದು. ಸಿಬ್ಬಂದಿಗಳಿಗೆ ವೇತನ ಸಮಸ್ಯೆ ಆಗಬಾರದು. ಕೇಳಿ ದಷ್ಟು ಹಣ ನೀಡುತ್ತೇವೆ. ಕೋವಿಡ್ ರೋಗಿಗಳ ಶವ ಸಂಸ್ಕಾರ ಗೌರವಯುತವಾಗಿ ನಡೆಯಬೇಕು ಎಂದರು.
ಆರೋಗ್ಯ ಸಚಿವ ಸುಧಾಕರ್ ಮಾತನಾಡಿ, ಸಿಎಂ ಬೇಗ ಗುಣಮುಖರಾಗಿ ಹೊರಬರುತ್ತಾರೆ. ಬಳಿಕ ಬೆಂಗಳೂರು ಶಾಸಕರ ಜೊತೆ ಸಭೆ ಮಾಡಬೇಕು. ನಂತರ ಪ್ರತ್ಯೇಕ ಮಾರ್ಗಸೂಚಿ ತೆಗೆದುಕೊಳ್ಳುತ್ತೇವೆ. ಬೆಂಗಳೂರಿನಲ್ಲಿ ಎಂಟು ವಲಯಮಾಡಿದ್ದೇವೆ. ಅಲ್ಲಿ ನೋಡಲ್ ಆಫೀಸರ್ ನೇಮಕ ಮಾಡಿದ್ದೇವೆ. ಎಲ್ಲಿಯೂ ಬೆಡ್ ಸಮಸ್ಯೆ ಎದುರಾಗಿಲ್ಲ. ಅಂತಹ ಆಸ್ಪತ್ರೆಗಳಿದ್ದರೆ ಇಲ್ಲಿ ತಿಳಿಸುವಂತೆ ಹೇಳಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ