ಬೆಂಗಳೂರು: ದೇಶದಲ್ಲಿ ಕೊರೋನ ಎರಡನೇ ಅಲೆಯು ವ್ಯಾಪಿಸುತ್ತಿದ್ದು,ಸಾರ್ವಜನಿಕರು ಕೋವಿಡ್ ಸಂಬಂಧಿತ ಮುಂಜಾಗರೂಕತಾ ಕ್ರಮಗಳನ್ನೆಲ್ಲಾ ಅಳವಡಿಸಿಕೊಂಡು ಮುನ್ನೆಚ್ಚರಿಕೆ ವಹಿಸುವುದು ಹಾಗೂ ಸರ್ಕಾರದ ಆದೇಶಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಕರೆ ನೀಡಿದ್ದಾರೆ.
ಶಾಲಾ ಕಾಲೇಜುಗಳನ್ನು ಸಂಪೂರ್ಣ ಬಂದ್ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿರುವುದರಿಂದ ವಿದ್ಯಾರ್ಥಿಗಳು ಅನಗತ್ಯ ಸುತ್ತಾಟ ನಡೆಸದೇ, ಮನೆಯೊಳಗೆ ಇದ್ದು ಅಧ್ಯಯನ ನಿರತರಾಗಬೇಕೆಂದು ಪ್ರಕಟನೆಯಲ್ಲಿ ಅವರು ಸಲಹೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ, ದ್ವಿತಿಯ ಪಿಯುಸಿ ಮುಂತಾದ ಪರೀಕ್ಷೆಗಳನ್ನು ಎದುರಿಸಲಿರುವ ವಿದ್ಯಾರ್ಥಿಗಳು ಈ ರಜಾವಧಿಯನ್ನು ಸದುಪಯೋಗ ಪಡಿಸಬೇಕೆಂದೂ ರಮಝಾನ್ ಆರಾಧನೆಗೆ ಸಂಬಂಧಿಸಿ ವಿದ್ವಾಂಸರು ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸ ಅದಿ ಶಿವಮೊಗ್ಗ ಹಾಗೂ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ