ಬೆಂಗಳೂರು: ದೇಶದಲ್ಲಿ ಕೊರೋನ ಎರಡನೇ ಅಲೆಯು ವ್ಯಾಪಿಸುತ್ತಿದ್ದು,ಸಾರ್ವಜನಿಕರು ಕೋವಿಡ್ ಸಂಬಂಧಿತ ಮುಂಜಾಗರೂಕತಾ ಕ್ರಮಗಳನ್ನೆಲ್ಲಾ ಅಳವಡಿಸಿಕೊಂಡು ಮುನ್ನೆಚ್ಚರಿಕೆ ವಹಿಸುವುದು ಹಾಗೂ ಸರ್ಕಾರದ ಆದೇಶಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಕರೆ ನೀಡಿದ್ದಾರೆ.
ಶಾಲಾ ಕಾಲೇಜುಗಳನ್ನು ಸಂಪೂರ್ಣ ಬಂದ್ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿರುವುದರಿಂದ ವಿದ್ಯಾರ್ಥಿಗಳು ಅನಗತ್ಯ ಸುತ್ತಾಟ ನಡೆಸದೇ, ಮನೆಯೊಳಗೆ ಇದ್ದು ಅಧ್ಯಯನ ನಿರತರಾಗಬೇಕೆಂದು ಪ್ರಕಟನೆಯಲ್ಲಿ ಅವರು ಸಲಹೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ, ದ್ವಿತಿಯ ಪಿಯುಸಿ ಮುಂತಾದ ಪರೀಕ್ಷೆಗಳನ್ನು ಎದುರಿಸಲಿರುವ ವಿದ್ಯಾರ್ಥಿಗಳು ಈ ರಜಾವಧಿಯನ್ನು ಸದುಪಯೋಗ ಪಡಿಸಬೇಕೆಂದೂ ರಮಝಾನ್ ಆರಾಧನೆಗೆ ಸಂಬಂಧಿಸಿ ವಿದ್ವಾಂಸರು ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸ ಅದಿ ಶಿವಮೊಗ್ಗ ಹಾಗೂ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?