ಬೆಂಗಳೂರು: ದೇಶದಲ್ಲಿ ಕೊರೋನ ಎರಡನೇ ಅಲೆಯು ವ್ಯಾಪಿಸುತ್ತಿದ್ದು,ಸಾರ್ವಜನಿಕರು ಕೋವಿಡ್ ಸಂಬಂಧಿತ ಮುಂಜಾಗರೂಕತಾ ಕ್ರಮಗಳನ್ನೆಲ್ಲಾ ಅಳವಡಿಸಿಕೊಂಡು ಮುನ್ನೆಚ್ಚರಿಕೆ ವಹಿಸುವುದು ಹಾಗೂ ಸರ್ಕಾರದ ಆದೇಶಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಕರೆ ನೀಡಿದ್ದಾರೆ.
ಶಾಲಾ ಕಾಲೇಜುಗಳನ್ನು ಸಂಪೂರ್ಣ ಬಂದ್ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿರುವುದರಿಂದ ವಿದ್ಯಾರ್ಥಿಗಳು ಅನಗತ್ಯ ಸುತ್ತಾಟ ನಡೆಸದೇ, ಮನೆಯೊಳಗೆ ಇದ್ದು ಅಧ್ಯಯನ ನಿರತರಾಗಬೇಕೆಂದು ಪ್ರಕಟನೆಯಲ್ಲಿ ಅವರು ಸಲಹೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ, ದ್ವಿತಿಯ ಪಿಯುಸಿ ಮುಂತಾದ ಪರೀಕ್ಷೆಗಳನ್ನು ಎದುರಿಸಲಿರುವ ವಿದ್ಯಾರ್ಥಿಗಳು ಈ ರಜಾವಧಿಯನ್ನು ಸದುಪಯೋಗ ಪಡಿಸಬೇಕೆಂದೂ ರಮಝಾನ್ ಆರಾಧನೆಗೆ ಸಂಬಂಧಿಸಿ ವಿದ್ವಾಂಸರು ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸ ಅದಿ ಶಿವಮೊಗ್ಗ ಹಾಗೂ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ