ಕೋಝಿಕ್ಕೋಡ್| ಮಾನವೀಯ ನೆಲೆಯಲ್ಲಿ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರ ಆರೋಗ್ಯವನ್ನು ಸಂರಕ್ಷಿಸಲು ಮಧ್ಯಪ್ರವೇಶಿಸುವಂತೆ ಕೋರಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಪತ್ರ ಬರೆದಿದ್ದಾರೆ.
ಸಿದ್ದೀಕ್ ಕಾಪ್ಪನ್ ಪ್ರಸ್ತುತ ಉತ್ತರ ಪ್ರದೇಶದ ಮಥುರಾ ವೈದ್ಯಕೀಯ ಕಾಲೇಜಿನಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಕೋವಿಡ್ ಮತ್ತು ಇತರ ಕಾಯಿಲೆಗಳಿಂದಾಗಿ ಆರೋಗ್ಯದ ಸ್ಥಿತಿ ಶೋಚನೀಯವಾಗಿದೆ ಎಂದು ಮಾಧ್ಯಮ ವರದಿಗಳಿಂದ ತಿಳಿದು ಬಂದಿದೆ.
ಅವರಿಗೆ ಮೂಲಭೂತ ಮಾನವ ಹಕ್ಕುಗಳನ್ನು ನಿರಾಕರಿಸಲಾಗಿದೆ, ಕೈಕೋಳದಲ್ಲಿ ಬಂಧಿಸಲಾಗಿದ್ದು, ಸ್ನಾನಗೃಹಕ್ಕೆ ಹೋಗಲು ಕೂಡ ಸಾಧ್ಯವಾಗದೆ ಬಹುದಿನಗಳಿಂದ ನರಕಯಾತನೆಯನ್ನು ಅನುಭವಿಸುತ್ತಿದ್ದಾರೆ.
ಆದ್ದರಿಂದ,ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಅಥವಾ ಕೇರಳಕ್ಕೆ ವರ್ಗಾಯಿಸಲು ಪ್ರಯತ್ನಿಸುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಾಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು, ಪ್ರಬಲ ಜಾತಿಯ ನಾಲ್ಕು ಮಂದಿಯಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಹಥ್ರಾಸ್ಗೆ ತೆರಳುತ್ತಿದ್ದಾಗ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ ಅಥವಾ ಯುಎಪಿಎ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಯೊಂದಿಗೆ ಪತ್ರಕರ್ತ ಸಂಪರ್ಕ ಹೊಂದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ. ಅವರನ್ನು ಬಂಧಿಸಿದಾಗಿನಿಂದ ಮಥುರಾದ ಜೈಲಿನಲ್ಲಿ ಇರಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ