ನವದೆಹಲಿ: ದೇಶದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿವುರುವ ಇಂತಹ ಸಂದರ್ಭದಲ್ಲಿಯೂ ರೆಮ್ಡೆಸಿವಿರ್ ಔಷಧಿಯನ್ನು ಆಕ್ಸಿಜನ್ ಸಪೋರ್ಟ್ ಇರುವವರಿಗೆ ಮಾತ್ರ ನೀಡಬೇಕು ಎಂಬ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದನ್ನು ಗಮನಿಸಿದರೆ ಸರ್ಕಾರವು ಜನರು ಸಾಯಬೇಕೆಂದು ಬಯಸಿದಂತೆ ಕಾಣುತ್ತಿದೆ ಎಂದು ದೆಹಲಿ ಹೈಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರ ಅಲ್ಪತನದ್ದಾಗಿದೆ. ಯೋಚಿಸದೇ ನಿರ್ಧಾರವನ್ನು ಕೈಗೊಂಡಂತಿದೆ. ಇದು ತಪ್ಪು. ಈಗ ಆಮ್ಲಜನಕ ಸಪೋರ್ಟ್ ಇಲ್ಲದ ಕೊರೊನಾ ರೋಗಿಗಳಿಗೆ ರೆಮ್ಡಿಸಿವಿರ್ ಸಿಗುವುದಿಲ್ಲ. ಇದು ನೀವು ಜನರು ಸಾಯಬೇಕೆಂದು ಬಯಸುತ್ತಿದ್ದೀರಿ ಎಂಬಂತೆ ತೋರುತ್ತಿದೆ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಔಷಧದ ಕೊರತೆಯನ್ನು ಕಡಿಮೆ ಮಾಡಲು ಕೇಂದ್ರವು ಮಾರ್ಗಸೂಚಿಯನ್ನು ಬದಲಾಯಿಸುತ್ತಿದೆ. ಇದು ಸಂಪೂರ್ಣ ಅಸಮರ್ಪಕ ನಿರ್ವಹಣೆ ಎಂದು ಹೈಕೋರ್ಟ್ ಹೇಳಿದೆ.ಅಗತ್ಯವಿದ್ದ 6 ಡೋಸ್ ರೆಮ್ಡಿಸಿವಿರ್ ಔಷಧದ ಬದಲು ಕೇವಲ 3 ಡೋಸ್ ಪಡೆದ ಕೊರೊನಾ ಸೋಂಕಿತ ವಕೀಲರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದೆ.
ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ರೋಗಿಯು ಮಂಗಳವಾರ ರಾತ್ರಿ ಉಳಿದ ಮೂರು ಡೋಸ್ ಔಷಧಿ ಪಡೆದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?