ನವದೆಹಲಿ: ದೇಶದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿವುರುವ ಇಂತಹ ಸಂದರ್ಭದಲ್ಲಿಯೂ ರೆಮ್ಡೆಸಿವಿರ್ ಔಷಧಿಯನ್ನು ಆಕ್ಸಿಜನ್ ಸಪೋರ್ಟ್ ಇರುವವರಿಗೆ ಮಾತ್ರ ನೀಡಬೇಕು ಎಂಬ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದನ್ನು ಗಮನಿಸಿದರೆ ಸರ್ಕಾರವು ಜನರು ಸಾಯಬೇಕೆಂದು ಬಯಸಿದಂತೆ ಕಾಣುತ್ತಿದೆ ಎಂದು ದೆಹಲಿ ಹೈಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರ ಅಲ್ಪತನದ್ದಾಗಿದೆ. ಯೋಚಿಸದೇ ನಿರ್ಧಾರವನ್ನು ಕೈಗೊಂಡಂತಿದೆ. ಇದು ತಪ್ಪು. ಈಗ ಆಮ್ಲಜನಕ ಸಪೋರ್ಟ್ ಇಲ್ಲದ ಕೊರೊನಾ ರೋಗಿಗಳಿಗೆ ರೆಮ್ಡಿಸಿವಿರ್ ಸಿಗುವುದಿಲ್ಲ. ಇದು ನೀವು ಜನರು ಸಾಯಬೇಕೆಂದು ಬಯಸುತ್ತಿದ್ದೀರಿ ಎಂಬಂತೆ ತೋರುತ್ತಿದೆ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಔಷಧದ ಕೊರತೆಯನ್ನು ಕಡಿಮೆ ಮಾಡಲು ಕೇಂದ್ರವು ಮಾರ್ಗಸೂಚಿಯನ್ನು ಬದಲಾಯಿಸುತ್ತಿದೆ. ಇದು ಸಂಪೂರ್ಣ ಅಸಮರ್ಪಕ ನಿರ್ವಹಣೆ ಎಂದು ಹೈಕೋರ್ಟ್ ಹೇಳಿದೆ.ಅಗತ್ಯವಿದ್ದ 6 ಡೋಸ್ ರೆಮ್ಡಿಸಿವಿರ್ ಔಷಧದ ಬದಲು ಕೇವಲ 3 ಡೋಸ್ ಪಡೆದ ಕೊರೊನಾ ಸೋಂಕಿತ ವಕೀಲರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದೆ.
ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ರೋಗಿಯು ಮಂಗಳವಾರ ರಾತ್ರಿ ಉಳಿದ ಮೂರು ಡೋಸ್ ಔಷಧಿ ಪಡೆದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ