ಕೋಲ್ಕತ್ತಾ,ಮೇ.02: ಪಶ್ಚಿಮ ಬಂಗಾಳಕ್ಕೆ ಕಳೆದ ಒಂದು ತಿಂಗಳ ಅವಧಿಯಲ್ಲಿ 8 ಹಂತದಲ್ಲಿ ಚುನಾವಣೆ ನಡೆಸಲಾಗಿತ್ತು. ಇಂದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಟಿಎಂಸಿ ಜಯಭೇರಿ ಸಾಧಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 217 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ಮತ್ತೊಂದೆಡೆ ಬಿಜೆಪಿ ಮೂರಂಕಿ ಗಡಿ ದಾಟದೆ ತೀವ್ರ ಮುಖಭಂಗ ಅನುಭವಿಸಿದೆ. ಈ ಫಲಿತಾಂಶ ಬಿಜೆಪಿ ಪಾಳಯದಲ್ಲಿ ದೊಡ್ಡ ನಿರಾಸೆಯೊಂದನ್ನು ಮೂಡಿಸಿರುವುದು ಸುಳ್ಳಲ್ಲ.
ಆದರೆ, ಈ ನಡುವೆ ನಂದಿಗ್ರಾಮ ಕ್ಷೇತ್ರದಲ್ಲಿ ಆರಂಭದಲ್ಲಿ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಇದೀಗ ದಿಢೀರ್ ಬೆಳವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಸೋಲನುಭವಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿರುವುದು ಟಿಎಂಸಿ ಪಾಳಯದಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಈ ಸೋಲನ್ನು ಒಪ್ಪದ ಮಮತಾ ಬ್ಯಾನರ್ಜಿ ಕೋರ್ಟ್ ಮೊರೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಚುನಾವಣೆ ಮತ ಎಣಿಗೆ ಆರಂಭವಾಗುತ್ತಿದ್ದಂತೆ ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ಸುವೆಂಧು ಅಧಿಕಾರಿ ಮುನ್ನಡೆ ಸಾಧಿಸಿದ್ದರೂ ಸಹ ಕೊನೆಯಲ್ಲಿ ಮಮತಾ ಬ್ಯಾನರ್ಜಿ ಭಾರೀ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಮತ್ತೊಂದೆಡೆ ಟಿಎಂಸಿ ಪಕ್ಷವೂ ಸಹ 217 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಜಯಭೇರಿ ಭಾರಿಸಿತ್ತು. ಆದರೆ, 1200 ಮತಗಳ ಅಂತದಲ್ಲಿ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದ್ದ ಚುನಾವಣಾ ಆಯೋಗ ಮತ್ತೆ ಫಲಿತಾಂಶವನ್ನು ಬದಲಿಸಿ ಸುವೆಂಧು ಅಧಿಕಾರಿ ಗೆದ್ದಿದ್ದಾರೆ ಎಂದು ಘೋಷಿಸಿದೆ. ಇದು ಸಾಮಾನ್ಯವಾಗಿ ಟಿಎಂಸಿ ಪಾಳಯದಲ್ಲಿ ದೊಡ್ಡ ಆಘಾತಕ್ಕೆ ಕಾರಣವಾಗಿದೆ.
ಹೀಗಾಗಿ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿರುವ ಮಮತಾ ಬ್ಯಾನರ್ಜಿ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಇಡೀ ಬಂಗಾಳವನ್ನೇ ಗೆದ್ದರೂ ಸಹ ಮಮತಾ ಬ್ಯಾನರ್ಜಿ ಸ್ವತಃ ತಾನು ಗೆಲ್ಲಲಾಗದ್ದು ಇದೀಗ ದೊಡ್ಡ ಚರ್ಚೆಗೂ ಕಾರಣವಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ